ಸಾಕು ಪ್ರಾಣಿಗಳಿಂದ ತೊಂದರೆ ಉಂಟಾದರೆ ಮಾಲಕರಿಗೆ ದಂಡ |

November 13, 2022
1:32 PM

ನಾಯಿಗಳ ಹಾವಳಿ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ನೋಯ್ಡಾ ಪ್ರಾಧಿಕಾರವು ಸಾಕುಪ್ರಾಣಿಗಳಿಗೆ ಸಂಬಂಧಿಸಿದಂತೆ ಹೊಸ ನೀತಿಯನ್ನು ರೂಪಿಸಿದೆ.  ಸಾಕುಪ್ರಾಣಿಗಳಿಂದ ತೊಂದರೆ ಉಂಟಾದರೆ, ಮಾಲಕರು 10,000 ರೂ. ದಂಡ ಪಾವತಿಸಬೇಕಾಗುತ್ತದೆ.

ಪ್ರಾಧಿಕಾರವು ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, ಸಾಕುಪ್ರಾಣಿಗಳ ಮಾಲೀಕರು ತಮ್ಮ ಶ್ವಾನ  ಅಥವಾ ಬೆಕ್ಕುಗಳನ್ನು ಮುಂದಿನ ವರ್ಷ ಜನವರಿ 31 ರೊಳಗೆ ನೋಂದಾಯಿಸಿಕೊಳ್ಳಬೇಕು. ಇಲ್ಲದಿದ್ದರೆ ದಂಡವನ್ನು ಪಾವತಿಸಬೇಕಾಗುತ್ತದೆ. ಇದಲ್ಲದೆ ಸಾಕು ನಾಯಿ ಅಥವಾ ಬೆಕ್ಕುಗಳಿಂದ ಯಾವುದೇ ಅನಾಹುತ ಉಂಟಾದರೆ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ.

ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಮಾರ್ಗಸೂಚಿಗಳಿಗೆ ಅನುಗುಣವಾಗಿ ನೋಯ್ಡಾ ಪ್ರಾಧಿಕಾರದ 207 ನೇ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಗರದಲ್ಲಿ ಶ್ವಾನಗಳ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ.

ನೋಯ್ಡಾ ಪ್ರಾಧಿಕಾರದ ಹೊಸ ನೀತಿಯ ಪ್ರಕಾರ, ಸಾಕು ನಾಯಿಗಳು ಅಥವಾ ಬೆಕ್ಕುಗಳ ನೋಂದಣಿಯು ಜನವರಿ 31, 2023 ರವರೆಗೆ ಕಡ್ಡಾಯವಾಗಿದೆ. ನೋಂದಣಿಯಾಗದಿದ್ದಲ್ಲಿ ದಂಡವನ್ನು ವಿಧಿಸಲಾಗುತ್ತದೆ ಎಂದು ಎಚ್ಚರಿಸಿದೆ. ಅಷ್ಟೇ ಅಲ್ಲದೆ ಸಾಕು ನಾಯಿಗಳಿಗೆ ಕ್ರಿಮಿನಾಶಕ ಅಥವಾ ಆ್ಯಂಟಿರೇಬಿಸ್ ಲಸಿಕೆಯನ್ನು ಕಡ್ಡಾಯಗೊಳಿಸಲಾಗಿದ್ದು, ಉಲ್ಲಂಘಿಸಿದರೆ ಪ್ರತಿ ತಿಂಗಳು 2,000 ರೂಪಾಯಿ ದಂಡ ವಿಧಿಸಲು ಅವಕಾಶವಿದೆ.

ನೋಯ್ಡಾ ಪ್ರಾಧಿಕಾರದ 207 ನೇ ಮಂಡಳಿಯ ಸಭೆಯಲ್ಲಿ, ಬೀದಿ ನಾಯಿಗಳು / ಸಾಕು ಬೆಕ್ಕುಗಳಿಗೆ ನೋಯ್ಡಾ ಪ್ರಾಧಿಕಾರದ ನೀತಿಯನ್ನು ರೂಪಿಸುವ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ನೋಯ್ಡಾ ಪ್ರದೇಶಕ್ಕಾಗಿ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಮಾರ್ಗಸೂಚಿಗಳನ್ನು ಅನುಸರಿಸಿ ಪ್ರಾಧಿಕಾರವು ಈ ನೀತಿಯನ್ನು ನಿರ್ಧರಿಸಿದೆ ಎಂದು ನೋಯ್ಡಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ರಿತು ಮಹೇಶ್ವರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ
ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ
May 7, 2026
7:40 AM
by: ಮಿರರ್‌ ಡೆಸ್ಕ್
ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
May 7, 2026
7:37 AM
by: ಮಿರರ್‌ ಡೆಸ್ಕ್
ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ
May 7, 2026
7:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror