ನಾಯಿಗಳ ಹಾವಳಿ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ನೋಯ್ಡಾ ಪ್ರಾಧಿಕಾರವು ಸಾಕುಪ್ರಾಣಿಗಳಿಗೆ ಸಂಬಂಧಿಸಿದಂತೆ ಹೊಸ ನೀತಿಯನ್ನು ರೂಪಿಸಿದೆ. ಸಾಕುಪ್ರಾಣಿಗಳಿಂದ ತೊಂದರೆ ಉಂಟಾದರೆ, ಮಾಲಕರು 10,000 ರೂ. ದಂಡ ಪಾವತಿಸಬೇಕಾಗುತ್ತದೆ.
ಪ್ರಾಧಿಕಾರವು ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, ಸಾಕುಪ್ರಾಣಿಗಳ ಮಾಲೀಕರು ತಮ್ಮ ಶ್ವಾನ ಅಥವಾ ಬೆಕ್ಕುಗಳನ್ನು ಮುಂದಿನ ವರ್ಷ ಜನವರಿ 31 ರೊಳಗೆ ನೋಂದಾಯಿಸಿಕೊಳ್ಳಬೇಕು. ಇಲ್ಲದಿದ್ದರೆ ದಂಡವನ್ನು ಪಾವತಿಸಬೇಕಾಗುತ್ತದೆ. ಇದಲ್ಲದೆ ಸಾಕು ನಾಯಿ ಅಥವಾ ಬೆಕ್ಕುಗಳಿಂದ ಯಾವುದೇ ಅನಾಹುತ ಉಂಟಾದರೆ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ.
ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಮಾರ್ಗಸೂಚಿಗಳಿಗೆ ಅನುಗುಣವಾಗಿ ನೋಯ್ಡಾ ಪ್ರಾಧಿಕಾರದ 207 ನೇ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಗರದಲ್ಲಿ ಶ್ವಾನಗಳ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ.ನೋಯ್ಡಾ ಪ್ರಾಧಿಕಾರದ ಹೊಸ ನೀತಿಯ ಪ್ರಕಾರ, ಸಾಕು ನಾಯಿಗಳು ಅಥವಾ ಬೆಕ್ಕುಗಳ ನೋಂದಣಿಯು ಜನವರಿ 31, 2023 ರವರೆಗೆ ಕಡ್ಡಾಯವಾಗಿದೆ. ನೋಂದಣಿಯಾಗದಿದ್ದಲ್ಲಿ ದಂಡವನ್ನು ವಿಧಿಸಲಾಗುತ್ತದೆ ಎಂದು ಎಚ್ಚರಿಸಿದೆ. ಅಷ್ಟೇ ಅಲ್ಲದೆ ಸಾಕು ನಾಯಿಗಳಿಗೆ ಕ್ರಿಮಿನಾಶಕ ಅಥವಾ ಆ್ಯಂಟಿರೇಬಿಸ್ ಲಸಿಕೆಯನ್ನು ಕಡ್ಡಾಯಗೊಳಿಸಲಾಗಿದ್ದು, ಉಲ್ಲಂಘಿಸಿದರೆ ಪ್ರತಿ ತಿಂಗಳು 2,000 ರೂಪಾಯಿ ದಂಡ ವಿಧಿಸಲು ಅವಕಾಶವಿದೆ.
ನೋಯ್ಡಾ ಪ್ರಾಧಿಕಾರದ 207 ನೇ ಮಂಡಳಿಯ ಸಭೆಯಲ್ಲಿ, ಬೀದಿ ನಾಯಿಗಳು / ಸಾಕು ಬೆಕ್ಕುಗಳಿಗೆ ನೋಯ್ಡಾ ಪ್ರಾಧಿಕಾರದ ನೀತಿಯನ್ನು ರೂಪಿಸುವ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ನೋಯ್ಡಾ ಪ್ರದೇಶಕ್ಕಾಗಿ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಮಾರ್ಗಸೂಚಿಗಳನ್ನು ಅನುಸರಿಸಿ ಪ್ರಾಧಿಕಾರವು ಈ ನೀತಿಯನ್ನು ನಿರ್ಧರಿಸಿದೆ ಎಂದು ನೋಯ್ಡಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿತು ಮಹೇಶ್ವರಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…