Advertisement
ಸುದ್ದಿಗಳು

ಸಾಕು ಪ್ರಾಣಿಗಳಿಂದ ತೊಂದರೆ ಉಂಟಾದರೆ ಮಾಲಕರಿಗೆ ದಂಡ |

Share

ನಾಯಿಗಳ ಹಾವಳಿ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ನೋಯ್ಡಾ ಪ್ರಾಧಿಕಾರವು ಸಾಕುಪ್ರಾಣಿಗಳಿಗೆ ಸಂಬಂಧಿಸಿದಂತೆ ಹೊಸ ನೀತಿಯನ್ನು ರೂಪಿಸಿದೆ.  ಸಾಕುಪ್ರಾಣಿಗಳಿಂದ ತೊಂದರೆ ಉಂಟಾದರೆ, ಮಾಲಕರು 10,000 ರೂ. ದಂಡ ಪಾವತಿಸಬೇಕಾಗುತ್ತದೆ.

Advertisement

ಪ್ರಾಧಿಕಾರವು ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, ಸಾಕುಪ್ರಾಣಿಗಳ ಮಾಲೀಕರು ತಮ್ಮ ಶ್ವಾನ  ಅಥವಾ ಬೆಕ್ಕುಗಳನ್ನು ಮುಂದಿನ ವರ್ಷ ಜನವರಿ 31 ರೊಳಗೆ ನೋಂದಾಯಿಸಿಕೊಳ್ಳಬೇಕು. ಇಲ್ಲದಿದ್ದರೆ ದಂಡವನ್ನು ಪಾವತಿಸಬೇಕಾಗುತ್ತದೆ. ಇದಲ್ಲದೆ ಸಾಕು ನಾಯಿ ಅಥವಾ ಬೆಕ್ಕುಗಳಿಂದ ಯಾವುದೇ ಅನಾಹುತ ಉಂಟಾದರೆ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ.

ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಮಾರ್ಗಸೂಚಿಗಳಿಗೆ ಅನುಗುಣವಾಗಿ ನೋಯ್ಡಾ ಪ್ರಾಧಿಕಾರದ 207 ನೇ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಗರದಲ್ಲಿ ಶ್ವಾನಗಳ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ.

ನೋಯ್ಡಾ ಪ್ರಾಧಿಕಾರದ ಹೊಸ ನೀತಿಯ ಪ್ರಕಾರ, ಸಾಕು ನಾಯಿಗಳು ಅಥವಾ ಬೆಕ್ಕುಗಳ ನೋಂದಣಿಯು ಜನವರಿ 31, 2023 ರವರೆಗೆ ಕಡ್ಡಾಯವಾಗಿದೆ. ನೋಂದಣಿಯಾಗದಿದ್ದಲ್ಲಿ ದಂಡವನ್ನು ವಿಧಿಸಲಾಗುತ್ತದೆ ಎಂದು ಎಚ್ಚರಿಸಿದೆ. ಅಷ್ಟೇ ಅಲ್ಲದೆ ಸಾಕು ನಾಯಿಗಳಿಗೆ ಕ್ರಿಮಿನಾಶಕ ಅಥವಾ ಆ್ಯಂಟಿರೇಬಿಸ್ ಲಸಿಕೆಯನ್ನು ಕಡ್ಡಾಯಗೊಳಿಸಲಾಗಿದ್ದು, ಉಲ್ಲಂಘಿಸಿದರೆ ಪ್ರತಿ ತಿಂಗಳು 2,000 ರೂಪಾಯಿ ದಂಡ ವಿಧಿಸಲು ಅವಕಾಶವಿದೆ.

ನೋಯ್ಡಾ ಪ್ರಾಧಿಕಾರದ 207 ನೇ ಮಂಡಳಿಯ ಸಭೆಯಲ್ಲಿ, ಬೀದಿ ನಾಯಿಗಳು / ಸಾಕು ಬೆಕ್ಕುಗಳಿಗೆ ನೋಯ್ಡಾ ಪ್ರಾಧಿಕಾರದ ನೀತಿಯನ್ನು ರೂಪಿಸುವ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ನೋಯ್ಡಾ ಪ್ರದೇಶಕ್ಕಾಗಿ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಮಾರ್ಗಸೂಚಿಗಳನ್ನು ಅನುಸರಿಸಿ ಪ್ರಾಧಿಕಾರವು ಈ ನೀತಿಯನ್ನು ನಿರ್ಧರಿಸಿದೆ ಎಂದು ನೋಯ್ಡಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ರಿತು ಮಹೇಶ್ವರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

8 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago