Advertisement
ಸುದ್ದಿಗಳು

ಸಾಕು ಪ್ರಾಣಿಗಳಿಂದ ತೊಂದರೆ ಉಂಟಾದರೆ ಮಾಲಕರಿಗೆ ದಂಡ |

Share

ನಾಯಿಗಳ ಹಾವಳಿ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ನೋಯ್ಡಾ ಪ್ರಾಧಿಕಾರವು ಸಾಕುಪ್ರಾಣಿಗಳಿಗೆ ಸಂಬಂಧಿಸಿದಂತೆ ಹೊಸ ನೀತಿಯನ್ನು ರೂಪಿಸಿದೆ.  ಸಾಕುಪ್ರಾಣಿಗಳಿಂದ ತೊಂದರೆ ಉಂಟಾದರೆ, ಮಾಲಕರು 10,000 ರೂ. ದಂಡ ಪಾವತಿಸಬೇಕಾಗುತ್ತದೆ.

Advertisement
Advertisement

ಪ್ರಾಧಿಕಾರವು ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, ಸಾಕುಪ್ರಾಣಿಗಳ ಮಾಲೀಕರು ತಮ್ಮ ಶ್ವಾನ  ಅಥವಾ ಬೆಕ್ಕುಗಳನ್ನು ಮುಂದಿನ ವರ್ಷ ಜನವರಿ 31 ರೊಳಗೆ ನೋಂದಾಯಿಸಿಕೊಳ್ಳಬೇಕು. ಇಲ್ಲದಿದ್ದರೆ ದಂಡವನ್ನು ಪಾವತಿಸಬೇಕಾಗುತ್ತದೆ. ಇದಲ್ಲದೆ ಸಾಕು ನಾಯಿ ಅಥವಾ ಬೆಕ್ಕುಗಳಿಂದ ಯಾವುದೇ ಅನಾಹುತ ಉಂಟಾದರೆ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ.

Advertisement
ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಮಾರ್ಗಸೂಚಿಗಳಿಗೆ ಅನುಗುಣವಾಗಿ ನೋಯ್ಡಾ ಪ್ರಾಧಿಕಾರದ 207 ನೇ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಗರದಲ್ಲಿ ಶ್ವಾನಗಳ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ.

ನೋಯ್ಡಾ ಪ್ರಾಧಿಕಾರದ ಹೊಸ ನೀತಿಯ ಪ್ರಕಾರ, ಸಾಕು ನಾಯಿಗಳು ಅಥವಾ ಬೆಕ್ಕುಗಳ ನೋಂದಣಿಯು ಜನವರಿ 31, 2023 ರವರೆಗೆ ಕಡ್ಡಾಯವಾಗಿದೆ. ನೋಂದಣಿಯಾಗದಿದ್ದಲ್ಲಿ ದಂಡವನ್ನು ವಿಧಿಸಲಾಗುತ್ತದೆ ಎಂದು ಎಚ್ಚರಿಸಿದೆ. ಅಷ್ಟೇ ಅಲ್ಲದೆ ಸಾಕು ನಾಯಿಗಳಿಗೆ ಕ್ರಿಮಿನಾಶಕ ಅಥವಾ ಆ್ಯಂಟಿರೇಬಿಸ್ ಲಸಿಕೆಯನ್ನು ಕಡ್ಡಾಯಗೊಳಿಸಲಾಗಿದ್ದು, ಉಲ್ಲಂಘಿಸಿದರೆ ಪ್ರತಿ ತಿಂಗಳು 2,000 ರೂಪಾಯಿ ದಂಡ ವಿಧಿಸಲು ಅವಕಾಶವಿದೆ.

Advertisement

ನೋಯ್ಡಾ ಪ್ರಾಧಿಕಾರದ 207 ನೇ ಮಂಡಳಿಯ ಸಭೆಯಲ್ಲಿ, ಬೀದಿ ನಾಯಿಗಳು / ಸಾಕು ಬೆಕ್ಕುಗಳಿಗೆ ನೋಯ್ಡಾ ಪ್ರಾಧಿಕಾರದ ನೀತಿಯನ್ನು ರೂಪಿಸುವ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ನೋಯ್ಡಾ ಪ್ರದೇಶಕ್ಕಾಗಿ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಮಾರ್ಗಸೂಚಿಗಳನ್ನು ಅನುಸರಿಸಿ ಪ್ರಾಧಿಕಾರವು ಈ ನೀತಿಯನ್ನು ನಿರ್ಧರಿಸಿದೆ ಎಂದು ನೋಯ್ಡಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ರಿತು ಮಹೇಶ್ವರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ! ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

2 hours ago

ಹಲಸು ಮೇಳದತ್ತೊಂದು ಪಯಣ ಮಾಡೋಣವೇ? : ಪುತ್ತೂರಿನಲ್ಲಿ ಹಲಸು ಮೇಳ

ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…

2 hours ago

ಸಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು : ನೈಸರ್ಗಿಕ ಕೃಷಿಯಲ್ಲಿ ದೇಶಿ ಗೋವಿನ ಮಹತ್ವ ಬಹಳ ಮುಖ್ಯ

ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…

2 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

3 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

3 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

5 hours ago