ನಾಯಿಗಳ ಹಾವಳಿ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ನೋಯ್ಡಾ ಪ್ರಾಧಿಕಾರವು ಸಾಕುಪ್ರಾಣಿಗಳಿಗೆ ಸಂಬಂಧಿಸಿದಂತೆ ಹೊಸ ನೀತಿಯನ್ನು ರೂಪಿಸಿದೆ. ಸಾಕುಪ್ರಾಣಿಗಳಿಂದ ತೊಂದರೆ ಉಂಟಾದರೆ, ಮಾಲಕರು 10,000 ರೂ. ದಂಡ ಪಾವತಿಸಬೇಕಾಗುತ್ತದೆ.
ಪ್ರಾಧಿಕಾರವು ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, ಸಾಕುಪ್ರಾಣಿಗಳ ಮಾಲೀಕರು ತಮ್ಮ ಶ್ವಾನ ಅಥವಾ ಬೆಕ್ಕುಗಳನ್ನು ಮುಂದಿನ ವರ್ಷ ಜನವರಿ 31 ರೊಳಗೆ ನೋಂದಾಯಿಸಿಕೊಳ್ಳಬೇಕು. ಇಲ್ಲದಿದ್ದರೆ ದಂಡವನ್ನು ಪಾವತಿಸಬೇಕಾಗುತ್ತದೆ. ಇದಲ್ಲದೆ ಸಾಕು ನಾಯಿ ಅಥವಾ ಬೆಕ್ಕುಗಳಿಂದ ಯಾವುದೇ ಅನಾಹುತ ಉಂಟಾದರೆ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ.
ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಮಾರ್ಗಸೂಚಿಗಳಿಗೆ ಅನುಗುಣವಾಗಿ ನೋಯ್ಡಾ ಪ್ರಾಧಿಕಾರದ 207 ನೇ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಗರದಲ್ಲಿ ಶ್ವಾನಗಳ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ.ನೋಯ್ಡಾ ಪ್ರಾಧಿಕಾರದ ಹೊಸ ನೀತಿಯ ಪ್ರಕಾರ, ಸಾಕು ನಾಯಿಗಳು ಅಥವಾ ಬೆಕ್ಕುಗಳ ನೋಂದಣಿಯು ಜನವರಿ 31, 2023 ರವರೆಗೆ ಕಡ್ಡಾಯವಾಗಿದೆ. ನೋಂದಣಿಯಾಗದಿದ್ದಲ್ಲಿ ದಂಡವನ್ನು ವಿಧಿಸಲಾಗುತ್ತದೆ ಎಂದು ಎಚ್ಚರಿಸಿದೆ. ಅಷ್ಟೇ ಅಲ್ಲದೆ ಸಾಕು ನಾಯಿಗಳಿಗೆ ಕ್ರಿಮಿನಾಶಕ ಅಥವಾ ಆ್ಯಂಟಿರೇಬಿಸ್ ಲಸಿಕೆಯನ್ನು ಕಡ್ಡಾಯಗೊಳಿಸಲಾಗಿದ್ದು, ಉಲ್ಲಂಘಿಸಿದರೆ ಪ್ರತಿ ತಿಂಗಳು 2,000 ರೂಪಾಯಿ ದಂಡ ವಿಧಿಸಲು ಅವಕಾಶವಿದೆ.
ನೋಯ್ಡಾ ಪ್ರಾಧಿಕಾರದ 207 ನೇ ಮಂಡಳಿಯ ಸಭೆಯಲ್ಲಿ, ಬೀದಿ ನಾಯಿಗಳು / ಸಾಕು ಬೆಕ್ಕುಗಳಿಗೆ ನೋಯ್ಡಾ ಪ್ರಾಧಿಕಾರದ ನೀತಿಯನ್ನು ರೂಪಿಸುವ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ನೋಯ್ಡಾ ಪ್ರದೇಶಕ್ಕಾಗಿ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಮಾರ್ಗಸೂಚಿಗಳನ್ನು ಅನುಸರಿಸಿ ಪ್ರಾಧಿಕಾರವು ಈ ನೀತಿಯನ್ನು ನಿರ್ಧರಿಸಿದೆ ಎಂದು ನೋಯ್ಡಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿತು ಮಹೇಶ್ವರಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…