Advertisement
ಸುದ್ದಿಗಳು

ಕರಾಯ ಲಕ್ಷ್ಮಣ ಶೆಟ್ಟಿಯವರಿಗೆ ಬಾರ್ಯ ನೂರಿತ್ತಾಯ ಪ್ರತಿಷ್ಠಾನದ ಪ್ರಶಸ್ತಿ

Share

ಪುತ್ತೂರಿನ ದಿ. ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನವು ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಧಾರ್ಮಿಕ, ಸಾಮಾಜಿಕ ಕ್ಷೇತ್ರದ ಸಾಧಕ ಕರಾಯ ಲಕ್ಷ್ಮಣ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. 2023 ಎಪ್ರಿಲ್ 12ರಂದು ಪರ್ಲಡ್ಕ ‘ಅಗಸ್ತ್ಯ’ ಮನೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಭಾಸ್ಕರ ಬಾರ್ಯ ತಿಳಿಸಿದ್ದಾರೆ.

Advertisement
Advertisement
Advertisement
Advertisement

ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ನೀಲ್ತ್ಯಾರು ಮನೆಯ ಲಕ್ಷ್ಮಣ ಶೆಟ್ಟರು ಧಾರ್ಮಿಕ, ಸಾಮಾಜಿಕ ಕಾರ್ಯಕರ್ತರು. ತಾಳಮದ್ದಳೆ ಅರ್ಥದಾರಿ. ಕರಾಯ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷರಾಗಿದ್ದಾಗ ಭಜನಾ ಕಮ್ಮಟ ಮಾಡಿದ ನೆಗಳ್ತೆ ಇವರದು. ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾದಲ್ಲಿ ಅಭಿವೃದ್ಧಿ ಕಾರ್ಯದಲ್ಲಿ ಸಕ್ರಿಯತೆ. ಈಗವರಿಗೆ ಎಂಭತ್ತೆಂಟರ ಹರೆಯ. ಬದ್ಧತೆಯ ಬದುಕಿನ ಲಕ್ಷ್ಮಣ ಶೆಟ್ಟರ ಸಾಮಾಜಿಕ ಕಾಳಜಿಗೆ ಬಾರ್ಯ ಪ್ರತಿಷ್ಠಾನದ ಈ ವರುಷದ ಗೌರವ.

Advertisement

ಪ್ರತಿಷ್ಠಾನವು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಪ್ರತಿವರುಷ ಗೌರವಿಸುವ ಪರಿಪಾಠ ಇಟ್ಟುಕೊಂಡಿದೆ. ಇದುವರೆಗೆ – ಬ್ರಹ್ಮಶ್ರೀ ದಿ.ಕೆಮ್ಮಿಂಜೆ ಕೇಶವ ತಂತ್ರಿ, ದಿ.ಡಾ.ಶೇಣಿ ಗೋಪಾಲಕೃಷ್ಣ ಭಟ್, ದಿ.ರಾಮದಾಸ ಸಾಮಗ, ದಿ.ಬಾರ್ಯ ಜಯಕೀರ್ತಿ ಬುಣ್ಣು, ದಿ.ಚಂದು ಮೇಸ್ತ್ರಿ, ದಿ.ನಾಟಿವೈದ್ಯೆ ಅಕ್ಕು ಹೆಂಗ್ಸು, ಪಾಕಶಾಸ್ತ್ರಜ್ಞ ದಿ.ಶ್ರೀನಿವಾಸ ಭಟ್, ಸರಾಫ್ ರಾಮಚಂದ್ರ ಆಚಾರ್ಯ, ಸಂಗೀತ ಸಾಧಕ ಕುದ್ಮಾರು ವೆಂಕಟ್ರಮಣ ಭಟ್, ಅಧ್ಯಾಪಕ ವಾಸುದೇವ ಮಯ್ಯ, ವೈದ್ಯ ಡಾ.ಜೆ.ಸಿ.ಅಡಿಗ, ಬರೆಪ್ಪಾಡಿ ಅನಂತಕೃಷ್ಣ ಭಟ್, ಉಮೇಶ ಶೆಣೈ, ಸಹಕಾರಿ ನಿರಂಜನ ಕುಮಾರ್, ಪ್ರೊ.ವೇದವ್ಯಾಸ, ಕೆಯ್ಯೂರು ನಾರಾಯಣ ಭಟ್, ಫಿಲೋಮಿನಾ ಇ. ಬ್ರೆಗ್ಸ್, ವೇ.ಮೂ.ಹರೀಶ್ ಉಪಾಧ್ಯಾಯ, ಪೂಕಳ ಲಕ್ಷ್ಮೀನಾರಾಯಣ ಭಟ್ ರಾಮಕೃಷ್ಣ ಮಿತ್ಯಾಂತರು ಹಾಗೂ ಮೂಡಾಯೂರು ಚಂದ್ರಶೇಖರ ದೇವಾಡಿಗ ಪ್ರಶಸ್ತಿ ಸ್ವೀಕರಿಸಿದ್ದಾರೆ ಎಂದು ಸಮಿತಿಯ ಭಾಸ್ಕರ ಬಾರ್ಯ ತಿಳಿಸಿದ್ದಾರೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

2 days ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

2 days ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

3 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

3 days ago