ಪುತ್ತೂರಿನ ದಿ. ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನವು ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಧಾರ್ಮಿಕ, ಸಾಮಾಜಿಕ ಕ್ಷೇತ್ರದ ಸಾಧಕ ಕರಾಯ ಲಕ್ಷ್ಮಣ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. 2023 ಎಪ್ರಿಲ್ 12ರಂದು ಪರ್ಲಡ್ಕ ‘ಅಗಸ್ತ್ಯ’ ಮನೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಭಾಸ್ಕರ ಬಾರ್ಯ ತಿಳಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ನೀಲ್ತ್ಯಾರು ಮನೆಯ ಲಕ್ಷ್ಮಣ ಶೆಟ್ಟರು ಧಾರ್ಮಿಕ, ಸಾಮಾಜಿಕ ಕಾರ್ಯಕರ್ತರು. ತಾಳಮದ್ದಳೆ ಅರ್ಥದಾರಿ. ಕರಾಯ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷರಾಗಿದ್ದಾಗ ಭಜನಾ ಕಮ್ಮಟ ಮಾಡಿದ ನೆಗಳ್ತೆ ಇವರದು. ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾದಲ್ಲಿ ಅಭಿವೃದ್ಧಿ ಕಾರ್ಯದಲ್ಲಿ ಸಕ್ರಿಯತೆ. ಈಗವರಿಗೆ ಎಂಭತ್ತೆಂಟರ ಹರೆಯ. ಬದ್ಧತೆಯ ಬದುಕಿನ ಲಕ್ಷ್ಮಣ ಶೆಟ್ಟರ ಸಾಮಾಜಿಕ ಕಾಳಜಿಗೆ ಬಾರ್ಯ ಪ್ರತಿಷ್ಠಾನದ ಈ ವರುಷದ ಗೌರವ.
ಪ್ರತಿಷ್ಠಾನವು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಪ್ರತಿವರುಷ ಗೌರವಿಸುವ ಪರಿಪಾಠ ಇಟ್ಟುಕೊಂಡಿದೆ. ಇದುವರೆಗೆ – ಬ್ರಹ್ಮಶ್ರೀ ದಿ.ಕೆಮ್ಮಿಂಜೆ ಕೇಶವ ತಂತ್ರಿ, ದಿ.ಡಾ.ಶೇಣಿ ಗೋಪಾಲಕೃಷ್ಣ ಭಟ್, ದಿ.ರಾಮದಾಸ ಸಾಮಗ, ದಿ.ಬಾರ್ಯ ಜಯಕೀರ್ತಿ ಬುಣ್ಣು, ದಿ.ಚಂದು ಮೇಸ್ತ್ರಿ, ದಿ.ನಾಟಿವೈದ್ಯೆ ಅಕ್ಕು ಹೆಂಗ್ಸು, ಪಾಕಶಾಸ್ತ್ರಜ್ಞ ದಿ.ಶ್ರೀನಿವಾಸ ಭಟ್, ಸರಾಫ್ ರಾಮಚಂದ್ರ ಆಚಾರ್ಯ, ಸಂಗೀತ ಸಾಧಕ ಕುದ್ಮಾರು ವೆಂಕಟ್ರಮಣ ಭಟ್, ಅಧ್ಯಾಪಕ ವಾಸುದೇವ ಮಯ್ಯ, ವೈದ್ಯ ಡಾ.ಜೆ.ಸಿ.ಅಡಿಗ, ಬರೆಪ್ಪಾಡಿ ಅನಂತಕೃಷ್ಣ ಭಟ್, ಉಮೇಶ ಶೆಣೈ, ಸಹಕಾರಿ ನಿರಂಜನ ಕುಮಾರ್, ಪ್ರೊ.ವೇದವ್ಯಾಸ, ಕೆಯ್ಯೂರು ನಾರಾಯಣ ಭಟ್, ಫಿಲೋಮಿನಾ ಇ. ಬ್ರೆಗ್ಸ್, ವೇ.ಮೂ.ಹರೀಶ್ ಉಪಾಧ್ಯಾಯ, ಪೂಕಳ ಲಕ್ಷ್ಮೀನಾರಾಯಣ ಭಟ್ ರಾಮಕೃಷ್ಣ ಮಿತ್ಯಾಂತರು ಹಾಗೂ ಮೂಡಾಯೂರು ಚಂದ್ರಶೇಖರ ದೇವಾಡಿಗ ಪ್ರಶಸ್ತಿ ಸ್ವೀಕರಿಸಿದ್ದಾರೆ ಎಂದು ಸಮಿತಿಯ ಭಾಸ್ಕರ ಬಾರ್ಯ ತಿಳಿಸಿದ್ದಾರೆ
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…