Advertisement
ಸುದ್ದಿಗಳು

ಕರಾಯ ಲಕ್ಷ್ಮಣ ಶೆಟ್ಟಿಯವರಿಗೆ ಬಾರ್ಯ ನೂರಿತ್ತಾಯ ಪ್ರತಿಷ್ಠಾನದ ಪ್ರಶಸ್ತಿ

Share

ಪುತ್ತೂರಿನ ದಿ. ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನವು ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಧಾರ್ಮಿಕ, ಸಾಮಾಜಿಕ ಕ್ಷೇತ್ರದ ಸಾಧಕ ಕರಾಯ ಲಕ್ಷ್ಮಣ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. 2023 ಎಪ್ರಿಲ್ 12ರಂದು ಪರ್ಲಡ್ಕ ‘ಅಗಸ್ತ್ಯ’ ಮನೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಭಾಸ್ಕರ ಬಾರ್ಯ ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ನೀಲ್ತ್ಯಾರು ಮನೆಯ ಲಕ್ಷ್ಮಣ ಶೆಟ್ಟರು ಧಾರ್ಮಿಕ, ಸಾಮಾಜಿಕ ಕಾರ್ಯಕರ್ತರು. ತಾಳಮದ್ದಳೆ ಅರ್ಥದಾರಿ. ಕರಾಯ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷರಾಗಿದ್ದಾಗ ಭಜನಾ ಕಮ್ಮಟ ಮಾಡಿದ ನೆಗಳ್ತೆ ಇವರದು. ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾದಲ್ಲಿ ಅಭಿವೃದ್ಧಿ ಕಾರ್ಯದಲ್ಲಿ ಸಕ್ರಿಯತೆ. ಈಗವರಿಗೆ ಎಂಭತ್ತೆಂಟರ ಹರೆಯ. ಬದ್ಧತೆಯ ಬದುಕಿನ ಲಕ್ಷ್ಮಣ ಶೆಟ್ಟರ ಸಾಮಾಜಿಕ ಕಾಳಜಿಗೆ ಬಾರ್ಯ ಪ್ರತಿಷ್ಠಾನದ ಈ ವರುಷದ ಗೌರವ.

ಪ್ರತಿಷ್ಠಾನವು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಪ್ರತಿವರುಷ ಗೌರವಿಸುವ ಪರಿಪಾಠ ಇಟ್ಟುಕೊಂಡಿದೆ. ಇದುವರೆಗೆ – ಬ್ರಹ್ಮಶ್ರೀ ದಿ.ಕೆಮ್ಮಿಂಜೆ ಕೇಶವ ತಂತ್ರಿ, ದಿ.ಡಾ.ಶೇಣಿ ಗೋಪಾಲಕೃಷ್ಣ ಭಟ್, ದಿ.ರಾಮದಾಸ ಸಾಮಗ, ದಿ.ಬಾರ್ಯ ಜಯಕೀರ್ತಿ ಬುಣ್ಣು, ದಿ.ಚಂದು ಮೇಸ್ತ್ರಿ, ದಿ.ನಾಟಿವೈದ್ಯೆ ಅಕ್ಕು ಹೆಂಗ್ಸು, ಪಾಕಶಾಸ್ತ್ರಜ್ಞ ದಿ.ಶ್ರೀನಿವಾಸ ಭಟ್, ಸರಾಫ್ ರಾಮಚಂದ್ರ ಆಚಾರ್ಯ, ಸಂಗೀತ ಸಾಧಕ ಕುದ್ಮಾರು ವೆಂಕಟ್ರಮಣ ಭಟ್, ಅಧ್ಯಾಪಕ ವಾಸುದೇವ ಮಯ್ಯ, ವೈದ್ಯ ಡಾ.ಜೆ.ಸಿ.ಅಡಿಗ, ಬರೆಪ್ಪಾಡಿ ಅನಂತಕೃಷ್ಣ ಭಟ್, ಉಮೇಶ ಶೆಣೈ, ಸಹಕಾರಿ ನಿರಂಜನ ಕುಮಾರ್, ಪ್ರೊ.ವೇದವ್ಯಾಸ, ಕೆಯ್ಯೂರು ನಾರಾಯಣ ಭಟ್, ಫಿಲೋಮಿನಾ ಇ. ಬ್ರೆಗ್ಸ್, ವೇ.ಮೂ.ಹರೀಶ್ ಉಪಾಧ್ಯಾಯ, ಪೂಕಳ ಲಕ್ಷ್ಮೀನಾರಾಯಣ ಭಟ್ ರಾಮಕೃಷ್ಣ ಮಿತ್ಯಾಂತರು ಹಾಗೂ ಮೂಡಾಯೂರು ಚಂದ್ರಶೇಖರ ದೇವಾಡಿಗ ಪ್ರಶಸ್ತಿ ಸ್ವೀಕರಿಸಿದ್ದಾರೆ ಎಂದು ಸಮಿತಿಯ ಭಾಸ್ಕರ ಬಾರ್ಯ ತಿಳಿಸಿದ್ದಾರೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

3 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

15 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

16 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

22 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 days ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

2 days ago