MIRROR FOCUS

ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ  105% ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಆದರೆ ಮುಂದಿನ ತಾಪಮಾನ, ಬಿಸಿಗಾಳಿಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಬದಲಾವಣೆ ಸಾಧ್ಯತೆ ಇದೆ. ಹೆಚ್ಚುತ್ತಿರುವ ಶಾಖದ ಅಲೆಗಳು  ಗಂಭೀರ ಸವಾಲುಗಳನ್ನು ಒಡ್ಡುತ್ತಿವೆ. ಹೀಗಾಗಿ ಭಾರತವು ವಿಪರೀತ – ಶಾಖ ಮತ್ತು ಭಾರೀ ಮಳೆ  ಎರಡಕ್ಕೂ ಸಿದ್ಧವಾಗಬೇಕಾಗಿದೆ. ಹವಾಮಾನ ತಜ್ಞರು ಸರಿಯಾದ ನೀರಿನ ನಿರ್ವಹಣೆ, ವಿಪತ್ತು ಸಿದ್ಧತೆ ಮತ್ತು ಹವಾಮಾನ ನಿರೋಧಕ ಮೂಲಸೌಕರ್ಯದ ಅಗತ್ಯವಾಗಿ ಗಮನಹರಿಸುವಂತೆ ಸೂಚನೆ ನೀಡಿದ್ದಾರೆ.…..ಮುಂದೆ ಓದಿ….

Advertisement

ಭಾರತವು ಈ ಬಾರಿ ಈಗಿನ ಮುನ್ಸೂಚನೆಯಂತೆ ಸಾಮಾನ್ಯ ಅಥವಾ ಸಾಮಾನ್ಯಕ್ಕಿಂತ ಹೆಚ್ಚಿನ ಮುಂಗಾರು ಮಳೆಗೆ ಸಜ್ಜಾಗಿದ್ದು, ರೈತರು ಹಾಗೂ ಮಳೆಯ ಮೇಲೆ ಅವಲಂಬಿತವಾಗಿರುವ ಪ್ರಮುಖ ವಲಯಗಳಿಗೆ ಸದ್ಯ ಆಶಾದಾಯಕ ವಾತಾವರಣ ಇದೆ. ಜೂನ್ ನಿಂದ ಸೆಪ್ಟೆಂಬರ್ ವರೆಗೆ ದೀರ್ಘಾವಧಿಯ ಸರಾಸರಿ ಮಳೆಯ 105% ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿದ ಐಎಂಡಿ ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ, ಎಲ್ ನಿನೊ ಪರಿಸ್ಥಿತಿಗಳು ಈ ವರ್ಷ ತಟಸ್ಥವಾಗಿ ಉಳಿಯುವ ನಿರೀಕ್ಷೆಯಿದೆ ,  ಈಗಾಗಲೇ ದಾಖಲೆಯ ಶಾಖದ ಅಲೆಗಳನ್ನು ಎದುರಿಸುತ್ತಿರುವ ದೇಶಕ್ಕೆ ಇದು ಒಳ್ಳೆಯ ಸುದ್ದಿ.ಹೀಗಾಗಿ ಈ ವರ್ಷದ ಮುಂಗಾರು ಆಶಾದಾಯಕವಾಗಿ ಕಾಣುತ್ತಿದೆ  ಎಂದು  ಮೊಹಾಪಾತ್ರ ಹೇಳಿದ್ದಾರೆ.

“ದ ರೂರಲ್‌ ಮಿರರ್.ಕಾಂ” WhatsApp ಚಾನೆಲ್‌ ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ..

ಭಾರತದ ಕೃಷಿ ವಲಯಕ್ಕೆ ಮುಂಗಾರು ಮಳೆಯೇ ಆಧಾರವಾಗಿದೆ. ಉತ್ತಮ ಮಳೆಯ  ಮುನ್ಸೂಚನೆಯ ಹೊರತಾಗಿಯೂ, ಏಪ್ರಿಲ್-ಜೂನ್ ಅವಧಿಯಲ್ಲಿ ತೀವ್ರ ಶಾಖದ ದಿನಗಳು ಕಂಡುಬರಬಹುದು , ಇದು ಮುಂದಿನ ಮಳೆಯ ಬಗ್ಗೆ ಕಳವಳವನ್ನು ಹುಟ್ಟುಹಾಕುತ್ತದೆ ಎಂದಿದ್ದಾರೆ.

ಎಲ್ ನಿನೊ ಮತ್ತು ಲಾ ನಿನಾ ಪ್ರಮುಖ ಜಾಗತಿಕ ಹವಾಮಾನ ಪ್ರಭಾವಿಗಳು. ಎಲ್ ನಿನೊ ಪೆಸಿಫಿಕ್ ಮಹಾಸಾಗರವನ್ನು ಬೆಚ್ಚಗಾಗಿಸುತ್ತದೆ ಮತ್ತು ಭಾರತದಲ್ಲಿನ ಮಳೆಯ ಮೇಲೆ ಪರಿಣಾಂ ಬೀರುತ್ತದೆ. ಲಾ ನಿನಾ ಅದನ್ನು ತಂಪಾಗಿಸುತ್ತದೆ, ಹಾಗೂ ಮಾನ್ಸೂನ್‌ ಗೆ ಸಹಾಯ ಮಾಡುತ್ತದೆ.ಹೀಗಾಗಿ ಜೂನ್‌ ವೇಳೆಗೆ ಭಾರತವು ವಿಪರೀತ ಶಾಖ ಮತ್ತು ಉತ್ತಮ ಮಳೆ  ಎರಡಕ್ಕೂ ಸಿದ್ಧವಾಗಬೇಕಾಗಬಹುದು ಎನ್ನುವುದು ಈಗಿನ ನಿರೀಕ್ಷೆ.

“ದ ರೂರಲ್‌ ಮಿರರ್.ಕಾಂ” WhatsApp ಚಾನೆಲ್‌ ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ..

India is set for an above-normal monsoon season, bringing much-needed relief to farmers and key sectors dependent on rainfall. The India Meteorological Department (IMD) forecast 105% of the long-period average rainfall from June to September.

As India braces for both extremes—heat and heavy rain—climate experts stress the need for better water management, disaster preparedness, and climate-resilient infrastructure.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

4 hours ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

4 hours ago

ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?

ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…

10 hours ago

2025: ಲಕ್ಷ್ಮೀನಾರಾಯಣ ಯೋಗ | ಈ ರಾಶಿಗೆ ಅದೃಷ್ಟದ ಬಾಗಿಲು ಓಪನ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ

ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…

18 hours ago

ಹೀಟ್‌ವೇವ್‌ ಸಂಕಷ್ಟದಲ್ಲಿ ತೆಲಂಗಾಣ-ಹೈದರಾಬಾದ್‌ |

ತೆಲಂಗಾಣ ಹಾಗೂ ಹೈದ್ರಾಬಾದ್‌ ಪ್ರದೇಶದಲ್ಲಿ ಹೀಟ್‌ವೇವ್‌ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…

18 hours ago