ವೆದರ್ ಮಿರರ್

ಹವಾಮಾನ ವರದಿ | 10-07-2025 | ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ | ಜು.16 ರಿಂದ ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

11.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ತೋಟಗಳಿಗೆ ಔಷಧಿ ಸಿಂಪಡಿಸಲು ಇಡೀ ದಿನ ಕಾಲಾವಕಾಶ ಸಿಗುವ ಸಾಧ್ಯತೆಗಳು ಕಾಣಿಸುತ್ತಿಲ್ಲ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ತಾಲೂಕುಗಳಲ್ಲಿ ಸಾಮಾನ್ಯ ಮಳೆ ಹಾಗೂ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.  ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.  ಈಗಿನಂತೆ ಜುಲೈ 16ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅರಣ್ಯವಾಸಿಗಳು, ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ಜಾನುವಾರು ಮೇಯಿಸಲು ಅವಕಾಶ

ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ…

3 hours ago

ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?

ಮಳೆಯ ಕಾರಣದಿಂದ ಅಡಿಕೆಗೆ ಬಾಧಿಸಿದ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ…

8 hours ago

ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!

ಅಡಿಕೆಗೆ ಕೊಳೆರೋಗ ವ್ಯಾಪಕವಾಗುತ್ತಿದೆ. ವಾರದ ಮೊದಲು ಕೆಲವು ಕಡೆ ಮಾತ್ರವೇ ಅಡಿಕೆಗೆ ಕೊಳೆರೋಗ…

9 hours ago

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..

ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ…

13 hours ago

ಹವಾಮಾನ ವರದಿ | 24-07-2025 | ಜು.29 ರಿಂದ ಮಳೆ ಕಡಿಮೆ ನಿರೀಕ್ಷೆ..? | ಕೃಷಿಕರಿಗೆ ಪೂರಕವಾಗಬಹುದೇ ಹವಾಮಾನ..?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್‌ ಸ್ತರ  ಹಾಗೂ ಮಧ್ಯಮ…

14 hours ago