

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಕಡಬ ತಾಲೂಕುಗಳಲ್ಲಿ ಸ್ವಲ್ಪ ಕಡಿಮೆ ಇರಬಹುದು. ಈಗಿನಂತೆ ಜುಲೈ 15 ರಂದು ಒಂದು ದಿನ ಮಳೆ ಕಡಿಮೆ ಇದ್ದರೂ 16 ರಿಂದ ಉಡುಪಿ, ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 22 ರ ತನಕವೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 14ರಿಂದ ಮಳೆಯ ಪ್ರಮಾಣ ಕಡಿಮೆಯಾದರೂ, ಜುಲೈ 16 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ರಾಜಸ್ಥಾನ, ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶ ಗಡಿ ಭಾಗಗಳಲ್ಲಿ ಇನ್ನೊಂದು ತಿರುಗುವಿಕೆ ಉಂಟಾಗಿದೆ. ಇದರಿಂದ ಮುಂಗಾರು ಮಳೆ ಉತ್ತರ ಭಾರತದ ಕಡೆ ಹೆಚ್ಚಾಗುವ ನಿರೀಕ್ಷೆ ಇದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೂ 3…
ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿ ಸಾಧಕನಿಗೆ ಸನ್ಮಾನ. ಇಂತದೊಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವುದು ಕುಕ್ಕೆ…
ಮಂಗಳವಾರದಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಹಿಂಗಾರು ಹಂಗಾಮಿನ ಬೆಳೆಗಳಿಗಾಗಿ ಒಟ್ಟು 37,952…
ಮಹಿಳೆಯರ ಜೀವನದಲ್ಲಿ ಆರ್ಥಿಕ ಬದಲಾವಣೆ ತರಲು ಹಾಗೂ ಸ್ವಾವಲಂಬನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಅಶೋಕ ಮಾಸಾಳ ಅವರು ಜಮೀನಿನಲ್ಲಿ…
ಡ್ರ್ಯಾಗನ್ ಪ್ರೂಟ್ ಕೃಷಿಯನ್ನು ದೊಡ್ಡ ಪ್ರಮಾಣದಲ್ಲಿ ಅಳವಡಿಸಿಕೊಳ್ಳುವ ರೈತರನ್ನು ಬೆಂಬಲಿಸುವ ಪ್ರಯತ್ನದಲ್ಲಿ ಹೆಸರಘಟ್ಟದಲ್ಲಿರುವ…