Advertisement
ವೆದರ್ ಮಿರರ್

ಹವಾಮಾನ ವರದಿ | 30-07-2025 | ಬಿಸಿಲು ಕಾಣಲು ಆರಂಭವಾಗಿದೆ | ಮುಂದಿನ 10 ದಿನಗಳವರೆಗೆ ಕೃಷಿಕರಿಗೆ ಆಶಾದಾಯಕ ವಾತಾವರಣ ನಿರೀಕ್ಷೆ |

Share

31.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಎರಡು ಮೂರು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಿಸಿಲಿನ ತಾಪ ಹೆಚ್ಚಿರುವುದರಿಂದ ಗಾಳಿಯ ಸಾಧ್ಯತೆಯೂ ಇದೆ. ಕಾಸರಗೋಡು ರಾತ್ರಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಮುಂದಿನ 10 ದಿನಗಳವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ದಿನದಲ್ಲಿ ಒಂದೆರಡು ಮಳೆಯ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗಿದ್ದು, ಆಗಸ್ಟ್ 1ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. ಆಗಸ್ಟ್ 4 ರ ನಂತರ ಮತ್ತೆ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಈ ವಾತಾವರಣವು ಆಗಸ್ಟ್ 3ರ ವರೆಗೆ ಮುಂದುವರಿಯುವ ಸಾಧ್ಯತೆಗಳಿದ್ದು, 4 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆಗಳಿವೆ. ಆಗಸ್ಟ್ 7 ರ ನಂತರ ಉತ್ತರ ಒಳನಾಡು ಭಾಗಗಳಲ್ಲಿಯೂ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

5 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago