Advertisement
ವೆದರ್ ಮಿರರ್

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

Share

11.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಜೆ ಗುಡುಗು ಸಹಿತ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿದ್ದು, ಮೇ14ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಮೇ 14ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 17ರ ತನಕವೂ ಈ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಮೇ 11ರಿಂದ ಮಳೆ ಆರಂಭವಾಗುವ ನಿರೀಕ್ಷೆ ಇದೆ.

ಅರಬ್ಬಿ ಸಮುದ್ರದ ಭಾಗದಿಂದ ಬೀಸುತ್ತಿರುವ ಮುಂಗಾರು ರೀತಿಯ ಗಾಳಿಯ ಪ್ರಭಾವ ಹಾಗೂ ಪ್ರಮಾಣ ಹೆಚ್ಚಾಗುತ್ತಿದೆ. ತಾತ್ಕಾಲಿಕ ಇರಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

4 hours ago

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…

11 hours ago

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

13 hours ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

14 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 day ago