ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

May 14, 2025
11:31 AM
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ. ಮುಂಗಾರು ಅವಧಿ ಪೂರ್ವ ಆಗಮನದ ನಿರೀಕ್ಷೆ ಇದ್ದು, ಮೇ 22ರಂದು ಅಂಡಮಾನ್, 26 ಅಥವಾ 27ರಂದು ಕೇರಳ ಹಾಗೂ ಅದೇ ಸಮಯದಲ್ಲಿ ರಾಜ್ಯಕ್ಕೂ ಪ್ರವೇಶಿಸುವ ವರದಿಗಳಿವೆ.

15.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕರಾವಳಿ : ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ, ಕೇರಳ – ದಕ್ಷಿಣ ಕನ್ನಡ ಗಡಿ ಭಾಗಗಳ ಅಲ್ಲಲ್ಲಿ, ಉಡುಪಿ, ದಕ್ಷಿಣ ಕನ್ನಡ ಘಟ್ಟದ ಕೆಳಗಿನ ಪ್ರದೇಶಗಳ ಅಲ್ಲಲ್ಲಿ, ಉತ್ತರ ಕನ್ನಡ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂಗಾರು ಪ್ರವೇಶದ ಪೂರ್ವ ಅಂದರೆ ಮುಂಗಾರು ಪ್ರಭಾವದಿಂದ ಮೇ18 ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಅಲ್ಲಿಯವರೆಗೆ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 15ರಿಂದ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದ್ದು, ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ ಇದ್ದು, ಹಾವೇರಿ, ಧಾರವಾಡ, ಬೆಳಗಾವಿ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು (ಪಾವಗಢ ಸಹಿತ) ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಈಗಿನಂತೆ ಮೇ 21ರ ತನಕವೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.

ಮೇಲಿನ ವಿಡಿಯೋ ನಕ್ಷೆಯಲ್ಲಿ ಕಾಣುವಂತೆ ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ. ಮುಂಗಾರು ಅವಧಿ ಪೂರ್ವ ಆಗಮನದ ನಿರೀಕ್ಷೆ ಇದ್ದು, ಮೇ 22ರಂದು ಅಂಡಮಾನ್, 26 ಅಥವಾ 27ರಂದು ಕೇರಳ ಹಾಗೂ ಅದೇ ಸಮಯದಲ್ಲಿ ರಾಜ್ಯಕ್ಕೂ ಪ್ರವೇಶಿಸುವ ವರದಿಗಳಿವೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ
June 19, 2025
7:23 AM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ
June 19, 2025
7:03 AM
by: ದ ರೂರಲ್ ಮಿರರ್.ಕಾಂ
ಜಲ ಸಂರಕ್ಷಣೆ ಅಭಿಯಾನ ಸಪ್ತಾಹ | ಬೆಂಗಳೂರಿನ ಜಲ ಮಂಡಳಿಗೆ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಪ್ರಮಾಣ ಪತ್ರ
June 19, 2025
6:55 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ
June 19, 2025
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group