Advertisement
ಸುದ್ದಿಗಳು

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

Share

12.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಈಗಿನಂತೆ ಆಗಸ್ಟ್ 14ರ ತನಕವೂ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಗಳಿದ್ದು 15 ರಿಂದ 20ರ ತನಕ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಚುರುಕಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಆಗಸ್ಟ್ 16 ರ ತನಕ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಗಳಿದ್ದು, 17 ರಿಂದ 19 ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಗದಗ, ದಾವಣಗೆರೆ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ರಾಯಚೂರು, ಯಾದಗಿರಿ ಜಿಲ್ಲೆಗಳ ಅಂದ್ರಾ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.  ಈಗಿನಂತೆ ಆಗಸ್ಟ್ 12 ರಿಂದ ಉತ್ತರ ಒಳನಾಡು ಭಾಗಗಳಲ್ಲಿ, ಆಗಸ್ಟ್ 19ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಆಗಸ್ಟ್ 17ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ 16ರಂದು ಒಡಿಸ್ಸಾ ಕರಾವಳಿ ಮೂಲಕ ಪ್ರವೇಶಿಸುವ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

9 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

9 hours ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

9 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

9 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

18 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

22 hours ago