ಹವಾಮಾನ ವರದಿ | 06-09-2025 | ಮಳೆಯ ಸಾಧ್ಯತೆ ಎಲ್ಲೆಲ್ಲಾ ಇದೆ..? ಭಾರೀ ಮಳೆ ಎಲ್ಲಿ..?

September 6, 2025
2:56 PM
ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದು, ತಮಿಳುನಾಡು ಮೂಲಕ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪರಿಣಾಮದಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯು ಮುಂದುವರಿಯುವ ಸಾಧ್ಯತೆಗಳಿವೆ.

07.09.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆಗಳಿವೆ.  ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಮೋಡ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಸ್ವಲ್ಪ ಹೆಚ್ಚು ಮಳೆ ಇರಬಹುದು. ಈಗಿನಂತೆ ಮುಂದಿನ 2 ದಿವಸಗಳ ಕಾಲ ಹಾಸನ ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉಳಿದ ಮಲೆನಾಡು ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.

ಒಳನಾಡು ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು(ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ.

ಈಗಿನಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ ಮಳೆ ಮುಂದುವರಿಯುವ ಲಕ್ಷಣಗಳಿವೆ. ವಾಯುಭಾರ ಕುಸಿತವು ಗುಜರಾತ್, ರಾಜಸ್ತಾನ ಗಡಿ ಭಾಗಗಳಿಗೆ ತಲುಪಿದ್ದು, ಗುಜರಾತ್ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದು, ತಮಿಳುನಾಡು ಮೂಲಕ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪರಿಣಾಮದಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯು ಮುಂದುವರಿಯುವ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror