13.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಆಗಾಗ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಉಳಿದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15 ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ. ಈ ಮಳೆಯು ಸೆಪ್ಟೆಂಬರ್ 20ರ ತನಕವೂ ಮುಂದುವರಿಯುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಸಂಜೆ, ರಾತ್ರಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. ಶಿವಮೊಗ್ಗ ಜಿಲ್ಲೆಯ ಹಾವೇರಿ, ದಾವಣಗೆರೆ ಜಿಲ್ಲೆಗಳಿಗೆ ಹೊಂದಿಕೊಂಡಿರುವ ತಾಲೂಕುಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 14 ರಿಂದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ವಿಜಯನಗರ, ದಾವಣಗೆರೆ, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು (ಪಾವಗಢ ಸಹಿತ) ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಇನ್ನೆರಡು ದಿನಗಳಲ್ಲಿ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗಬಹುದು. ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 12ರಿಂದ 2 ದಿವಸಗಳ ಕಾಲ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, 14 ಅಥವಾ 15 ರಂದು ಮತ್ತೆ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತವು ಸುಮಾರು ಸೆಪ್ಟೆಂಬರ್ 15ರಂದು ಮಹಾರಾಷ್ಟ್ರದ ಮುಂಬೈ ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…