ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

June 12, 2025
2:21 PM
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.

13.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಅಲ್ಲಲ್ಲಿ ಉತ್ತಮ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.  ಆದರೆ ಗಾಳಿಯ ಚಲನೆ ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಜೂನ್ 13ರ ರಾತ್ರಿ ಈ ಚಲನೆಯು ಪಶ್ಚಿಮದಿಂದ ಪೂರ್ವಕ್ಕೆ ಅಥವಾ ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿವೆ. ಆಗ ಮಾತ್ರ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯಾಗಬಹುದು.

ಮಲೆನಾಡು : ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 13ರಿಂದ ಗಾಳಿಯ ಚಲನೆಯ ದಿಕ್ಕು ಬದಲಾಗುವ ಸಾಧ್ಯತೆಗಳಿರುವುದರಿಂದ ಕೊಡಗು ಜಿಲ್ಲೆಯಲ್ಲಿ ನಾಳೆ ರಾತ್ರಿಯಿಂದ ಉತ್ತಮ ಮಳೆಯ ಸಾಧ್ಯತೆಗಳಿವೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಜೂನ್ 18ರ ತನಕ ಉತ್ತಮ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಉತ್ತಮ ಹಾಗೂ ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ
ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ
ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror