ಹವಾಮಾನ ವರದಿ | 28-09-2025 | ಸದ್ಯ ಮಳೆ ಲಕ್ಷಣವಿಲ್ಲ….ಕಾರಣವೇನು…?

September 28, 2025
1:05 PM
ಈಗಿನ ವಾಯುಭಾರ ಕುಸಿತವು ಇವತ್ತು ಮಹಾರಾಷ್ಟ್ರದ ಮುಂಬೈ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಅಕ್ಟೊಬರ್ 2 ರ ಸುಮಾರಿಗೆ ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿವೆ.

29.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಸುಳ್ಯ ತಾಲೂಕಿನಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು. ಬಿಟ್ಟು ಬಿಟ್ಟು ಬಿರುಸಿನ ಮಳೆಯ ಸಾಧ್ಯತೆ ಇದೆ. ಈಗಿನಂತೆ ಅಕ್ಟೊಬರ್ 4ರ ತನಕ ಈ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ. ನಾಲ್ಕೂ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು. ಈಗಿನಂತೆ ಅಕ್ಟೊಬರ್ 4 ರ ತನಕವೂ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆ ತೀವ್ರತೆ ಕಡಿಮೆಯಾಗಿದ್ದರೂ ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 30 ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದೆ. ಆದರೆ, ಅಕ್ಟೊಬರ್ 2 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ.

ಈಗಿನ ವಾಯುಭಾರ ಕುಸಿತವು ಇವತ್ತು ಮಹಾರಾಷ್ಟ್ರದ ಮುಂಬೈ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಅಕ್ಟೊಬರ್ 2 ರ ಸುಮಾರಿಗೆ ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿವೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror