Advertisement
ಸುದ್ದಿಗಳು

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

Share

22.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು. ಈಗಿನಂತೆ ಜೂನ್ 22ರಿಂದ ಮಳೆ ಸ್ವಲ್ಪ ಹೆಚ್ಚಾಗುವ ಲಕ್ಷಣಗಳಿದ್ದರೂ ಭಾರಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಜೂನ್ 28ರ ತನಕ ಮುಂದುವರಿಯಬಹುದು. 29ರಿಂದ ಮಳೆ ಬಿಡುವು ಪಡೆಯುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 22ರಂದು ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿದ್ದರೂ 23ರಿಂದ ಕಡಿಮೆಯಾಗುವ ಲಕ್ಷಣಗಳಿವೆ. ದಿನದಲ್ಲಿ 2,3 ಸಾಮಾನ್ಯ ಮಳೆ ಜೂನ್ 29ರ ತನಕ ಮುಂದುವರಿಯುವ ಸೂಚನೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾತ್ತಿದೆ.

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು ನಮ್ಮ ಮುಂಗಾರಿನ ಮೇಲೆ ಯಾವ ರೀತಿಯ ಪರಿಣಾಮಗಳು ಬೀರಬಹುದು? ಮುಂಗಾರು ಕ್ಷೀಣಿಸುವ ಸಾಧ್ಯತೆಗಳಿವೆಯೇ? ಅಥವಾ ದೀರ್ಘ ಅವಧಿಗೆ ವಿಸ್ತರಿಸಬಹುದೇ? ತಜ್ಞರು ಅಧ್ಯಯನ ನಡೆಸಬೇಕಾದ ಅಗತ್ಯವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

11 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago