Advertisement
ಸುದ್ದಿಗಳು

ಹವಾಮಾನ ವರದಿ | 12-10-2024 | ಅ.14 ರಿಂದ ಹಿಂಗಾರು ಮಳೆ ಆರಂಭ ಸಾಧ್ಯತೆ | ವಾಯುಭಾರ ಕುಸಿತದ ಕಾರಣ ಹೆಚ್ಚು ಮಳೆ ನಿರೀಕ್ಷೆ |

Share

13.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement
Advertisement

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕಡಲ ತೀರ ಭಾಗಗಳ ಸುತ್ತಮುತ್ತ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಅಕ್ಟೊಬರ್ 14 ರಿಂದ ಹಿಂಗಾರು ಮತ್ತು ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

Advertisement

ಮಲೆನಾಡು : ಕೊಡಗು ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಳನಾಡು ಭಾಗಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಹಿಂಗಾರು ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಅಕ್ಟೊಬರ್ 14ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.

ಒಳನಾಡು : ಹಾವೇರಿ, ಧಾರವಾಡ, ಗದಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 17ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

Advertisement

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಓಮನ್ ಕರಾವಳಿಗೆ ತಲಪಿ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯ ಆಂದ್ರಾ, ತಮಿಳುನಾಡು ಕರಾವಳಿಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಅಕ್ಟೊಬರ್ 16ರಂದು ತಮಿಳುನಾಡು ಅಥವಾ ಆಂದ್ರಾ ಕರಾವಳಿ ಮೂಲಕ ಪ್ರವೇಶಿಸುವ ಲಕ್ಷಣಗಳಿವೆ. ರಾಜ್ಯದಲ್ಲೂ ಇದರ ಪ್ರಭಾವದಿಂದ ಭಾರಿ ಮಳೆಯ ನಿರೀಕ್ಷೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಾಜ್ಯದಲ್ಲಿ ಇನ್ನು 6 ದಿನಗಳ ಕಾಲ ಧಾರಾಕಾರ ಮಳೆ | 16 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ | ಹವಾಮಾನ ಇಲಾಖೆ ಮಾಹಿತಿ |

ರಾಜ್ಯಾದ್ಯಂತ ಮುಂದಿನ 6  ದಿನಗಳ ಕಾಲ ಎಡಬಿಡದೆ ಮಳೆ ಬೀಳಲಿದೆ ಎಂದು ಹವಾಮಾನ…

24 mins ago

ಹವಾಮಾನ ವರದಿ | 23-10-2024 | ಸಾಮಾನ್ಯ ಮಳೆ ಮುಂದುವರಿಕೆ | ಅ.28 ರಿಂದ ತಾಪಮಾನದ ಕಾರಣದಿಂದ ಮಳೆ ಸಾಧ್ಯತೆ |

ಅಕ್ಟೊಬರ್ 24ರಂದು ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, 25ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ…

8 hours ago

ಸಿರಿಧಾನ್ಯ ಕೃಷಿಯಲ್ಲಿ ಯಶಸ್ಸು | ವಾಣಿಜ್ಯ ಬೆಳೆಯಿಂದ ಹೊರಬಂದ ರೈತರು | 5 ಹಳ್ಳಿಯಲ್ಲಿ ರೈತರಿಂದ ಪ್ರಯೋಗ |

ವಾಣಿಜ್ಯ ಬೆಳೆಯಿಂದ ಹೊರಬಂದು ಸಿರಿಧಾನ್ಯ ಬೆಳೆದು ಧಾನ್ಯ ಸಂಗ್ರಹಿಸಿ, ಸಂಸ್ಕರಿಸಿ, ತಾವೇ ಬ್ರಾಂಡಿಂಗ್‌…

9 hours ago

ಶರಾವತಿ ಮುಳುಗಡೆ ಸಂತ್ರಸ್ತರ ಹಕ್ಕುಪತ್ರ ನೀಡಲು ಒತ್ತಾಯಿಸಿ ಧರಣಿ

ಅರಣ್ಯವಾಸಿಗಳ ಕೃಷಿ ಭೂಮಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ…

11 hours ago

ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ

ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ, ರೋಟರಿ ಕ್ಲಬ್ ಪುತ್ತೂರು ಈಸ್ಟ್…

11 hours ago

ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |

ನ.2 ರಿಂದ 10ರ ವರೆಗೆ ಹವ್ಯಾಸಿ ಛಾಯಾಚಿತ್ರ ಗ್ರಾಹಕ ಅಭಿಷೇಕ.ಡಿ,ಪುಂಡಿತ್ತೂರು ಅವರ ಪಕ್ಷಿ,…

11 hours ago