ಹವಾಮಾನ ವರದಿ | 05-11-2024 | ಕೆಲವು ಕಡೆ ಗುಡುಗು ಸಹಿತ ಮಳೆ | ನ.10 ರಿಂದ ಮತ್ತೆ ಮಳೆ ಗ್ಯಾರಂಟಿ |

November 5, 2024
2:15 PM
ಬಂಗಾಳಕೊಲ್ಲಿಯ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಹಿಂಗಾರು ದುರ್ಬಲಗೊಳ್ಳುವ ಲಕ್ಷಣಗಳಿದ್ದು, ನವೆಂಬರ್ 10ರಿಂದ ಮತ್ತೆ ಬಲಗೊಳ್ಳುವ ಲಕ್ಷಣಗಳಿವೆ.

06.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಳೆಯ ವ್ಯಾಪ್ತಿಯೂ ಹೆಚ್ಚಿರಲಾರದು. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಈಗಿನಂತೆ ನವೆಂಬರ್ 6 ಮತ್ತು 7ರಂದು ಬಿಡುವು ಪಡೆವ ಮಳೆಯು ನ.8 ರಿಂದ ಅಲ್ಲಲ್ಲಿ ಸಾಮಾನ್ಯ ಮಳೆ ಪ್ರಾರಂಭವಾಗಿ, 10ರಿಂದ ಹೆಚ್ಚಾಗುವ ಸಾಧ್ಯತೆ ಇದೆ.

ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 8 ಅಥವಾ 9ರಿಂದ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 8ರಿಂದ ಮತ್ತೆ ಚುರುಕಾಗುವ ಸಾಧ್ಯತೆಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಹಿಂಗಾರು ದುರ್ಬಲಗೊಳ್ಳುವ ಲಕ್ಷಣಗಳಿದ್ದು, ನವೆಂಬರ್ 10ರಿಂದ ಮತ್ತೆ ಬಲಗೊಳ್ಳುವ ಲಕ್ಷಣಗಳಿವೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ
July 9, 2025
9:19 PM
by: The Rural Mirror ಸುದ್ದಿಜಾಲ
ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ
July 9, 2025
9:16 PM
by: The Rural Mirror ಸುದ್ದಿಜಾಲ
ಹೃದಯಾಘಾತದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ
July 9, 2025
9:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group