ವೆದರ್ ಮಿರರ್

ಹವಾಮಾನ ವರದಿ | 07-08-2024 | ರಾಜ್ಯದಲಿ ಕೆಲವು ಕಡೆ ಸಾಮಾನ್ಯ ಮಳೆ | ತಗ್ಗಿದ ಮಳೆಯ ಪ್ರಮಾಣ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

08.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚೆನೆ ಇದೆ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. (ಮುನ್ಸೂಚನೆಯಲ್ಲಿ ಉಡುಪಿ – ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು)

ಕೊಡಗು, ಹಾಸನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೂ ಮಧ್ಯಾಹ್ನ ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

ಮುಂಗಾರು ದುರ್ಬಲಗೊಳ್ಳುತ್ತಿದೆ. ಈಗಿನಂತೆ ಆಗಸ್ಟ್ 12 ಅಥವಾ 13ರ ಹೊತ್ತಿಗೆ ಭಾರತದ ಪಶ್ಚಿಮ ಕರಾವಳಿಯಾದ್ಯಂತ ಮುಂಗಾರು ದುರ್ಬಲಗೊಳ್ಳಲಿದೆ. ಆಗಸ್ಟ್ 8 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ತುಂತುರು ಮಳೆಗೆ ಸೀಮಿತವಾಗುವ ಲಕ್ಷಣಗಳಿವೆ. ಭಾರಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಉತ್ತರ ಹಾಗೂ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

4 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

11 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

21 hours ago

ಹವಾಮಾನ ವರದಿ | 22.04.2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.26ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ

23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago