Advertisement
ಸುದ್ದಿಗಳು

ಹವಾಮಾನ ವರದಿ | 14-08-2024 | ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |

Share

15.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. (ನಿನ್ನೆ ಸುಳ್ಯ ತಾಲೂಕಿನ ಹಲವು ಭಾಗಗಳಲ್ಲಿ ಮತ್ತು ಕಡಬ ತಾಲೂಕಿನ ಕೆಲವು ಭಾಗಗಳಲ್ಲಿ ಮೇಘ ಸ್ಪೋಟದಂತಹ ಮಳೆಯಾಗಿತ್ತು. ಇವತ್ತು ಆ ರೀತಿಯ ಮಳೆಯ ಸಾಧ್ಯತೆ ಕಡಿಮೆ ಇರಬಹುದು)

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೂಡಿಗೆರೆ, ಕುದುರೆಮುಖ, ಬಾಳೆಹೊನ್ನೂರು, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರದ ಕೊಳ್ಳೇಗಾಲ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ಗದಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಆಗಸ್ಟ್ 15ರಿಂದ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಜಾಸ್ತಿ ಇರಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

2 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

7 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

15 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

15 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

15 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

24 hours ago