15.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. (ನಿನ್ನೆ ಸುಳ್ಯ ತಾಲೂಕಿನ ಹಲವು ಭಾಗಗಳಲ್ಲಿ ಮತ್ತು ಕಡಬ ತಾಲೂಕಿನ ಕೆಲವು ಭಾಗಗಳಲ್ಲಿ ಮೇಘ ಸ್ಪೋಟದಂತಹ ಮಳೆಯಾಗಿತ್ತು. ಇವತ್ತು ಆ ರೀತಿಯ ಮಳೆಯ ಸಾಧ್ಯತೆ ಕಡಿಮೆ ಇರಬಹುದು)
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೂಡಿಗೆರೆ, ಕುದುರೆಮುಖ, ಬಾಳೆಹೊನ್ನೂರು, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರದ ಕೊಳ್ಳೇಗಾಲ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ಗದಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 15ರಿಂದ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಜಾಸ್ತಿ ಇರಬಹುದು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…