ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ ಕರ್ನಾಟಕದಲ್ಲಿ ಎಲ್ಲೊ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಇಂದು ಮಳೆಯ ಅಬ್ಬರ ಕಡಿಮೆಯಾಗಿದೆ. ಎರಡು ದಿನಗಳಿಂದ ರಜೆ ನೀಡಲ್ಪಟ್ಟಿದ್ದ ಶಿಕ್ಷಣ ಸಂಸ್ಥೆಗಳು ಇಂದು ಪುನರಾರಂಭಗೊಂಡಿದೆ. ಮೂರು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಕಾವೇರಿ, ಲಕ್ಷ್ಮಣತೀರ್ಥ ನದಿಗಳು ತುಂಬಿ ಹರಿಯುತ್ತಿದ್ದು ನದಿಪಾತ್ರದ ಹೊಲಗದ್ದೆಗಳು ಜಲಾವೃತಗೊಂಡಿವೆ.ಹಾರಂಗಿ ಜಲಾನಯನ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿರುವುದರಿಂದಾಗಿ ಹಾರಂಗಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಳವಾಗಿದ್ದು, 7 ಸಾವಿರದ 888 ಕ್ಯೂಸೆಕ್ ಒಳಹರಿವಿದೆ. ಜಲಾಶಯದಿಂದ ನದಿಗೆ 12 ಸಾವಿರದ 166 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. 2 ಸಾವಿರದ 859 ಅಡಿ ಗರಿಷ್ಟ ಸಂಗ್ರಹಣಾ ಸಾಮರ್ಥ್ಯದ ಜಲಾಶಯದಲ್ಲಿಂದು 2 ಸಾವಿರದ 850 ಅಡಿ ನೀರಿನ ಸಂಗ್ರಹವಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…