ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ ಕರ್ನಾಟಕದಲ್ಲಿ ಎಲ್ಲೊ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಇಂದು ಮಳೆಯ ಅಬ್ಬರ ಕಡಿಮೆಯಾಗಿದೆ. ಎರಡು ದಿನಗಳಿಂದ ರಜೆ ನೀಡಲ್ಪಟ್ಟಿದ್ದ ಶಿಕ್ಷಣ ಸಂಸ್ಥೆಗಳು ಇಂದು ಪುನರಾರಂಭಗೊಂಡಿದೆ. ಮೂರು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಕಾವೇರಿ, ಲಕ್ಷ್ಮಣತೀರ್ಥ ನದಿಗಳು ತುಂಬಿ ಹರಿಯುತ್ತಿದ್ದು ನದಿಪಾತ್ರದ ಹೊಲಗದ್ದೆಗಳು ಜಲಾವೃತಗೊಂಡಿವೆ.ಹಾರಂಗಿ ಜಲಾನಯನ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿರುವುದರಿಂದಾಗಿ ಹಾರಂಗಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಳವಾಗಿದ್ದು, 7 ಸಾವಿರದ 888 ಕ್ಯೂಸೆಕ್ ಒಳಹರಿವಿದೆ. ಜಲಾಶಯದಿಂದ ನದಿಗೆ 12 ಸಾವಿರದ 166 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. 2 ಸಾವಿರದ 859 ಅಡಿ ಗರಿಷ್ಟ ಸಂಗ್ರಹಣಾ ಸಾಮರ್ಥ್ಯದ ಜಲಾಶಯದಲ್ಲಿಂದು 2 ಸಾವಿರದ 850 ಅಡಿ ನೀರಿನ ಸಂಗ್ರಹವಿದೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…