ವೆದರ್ ಮಿರರ್

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

03.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಾಗ ಬಿಸಿಲು, ಮೋಡದ ಜೊತೆಗೆ ಅಲ್ಲಲ್ಲಿ ದಿನದಲ್ಲಿ 2 ಅಥವಾ 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈ ವಾತಾವರಣವು ಜೂನ್ 4ರ ತನಕ ಮುಂದುವರಿಯುವ ಮುನ್ಸೂಚನೆ ಇದ್ದು, 5 ರಿಂದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ. ಈಗಿನಂತೆ ಜೂನ್ 10ರಿಂದ ಮತ್ತೆ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಮಳೆ ಆರಂಭವಾಗಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ದಿನದಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಜೂನ್ 4ರ ತನಕ ಈ ವಾತಾವರಣ ಮುಂದುವರಿಯಬಹುದು. ನಂತರ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು, ಜೂನ್ 10ರಿಂದ ಸಾಮಾನ್ಯ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಕಲಬುರ್ಗಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಜೂನ್ 4ರಂದು ಒಂದೆರಡು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಬಿಸಿಲಿನ ವಾತಾವರಣ ಮುಂದುವರಿಯಲಿದೆ.

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ ಚುರುಕಾಗಬಹುದು. ಇದರ ಹೊರತು ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಮುಂದುವರಿಯಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಚಂದನ್‌ ಕೆ ಪಿ

ಚಂದನ್‌ ಕೆ ಪಿ, 8 ನೇ ತರಗತಿ, ರೋಟರಿ ಪ್ರೌಢಶಾಲೆ, ಪಡ್ಡಂಬೈಲು |…

47 minutes ago

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ

ಗೋಕರ್ಣ ಮಂಡಲಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ 32ನೇ ಚಾತುರ್ಮಾಸ್ಯ ವ್ರತ ಆಷಾಢ…

2 hours ago

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |

ಭಾರತವು ವಾರ್ಷಿಕವಾಗಿ ಅಂದಾಜು 1.4 ಮಿಲಿಯನ್ ಟನ್ ಹಲಸಿನ ಹಣ್ಣನ್ನು ಉತ್ಪಾದಿಸುತ್ತದೆ, ಆದರೆ…

16 hours ago

ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?

ಒಂದು ಕಡೆ ಅಡಿಕೆ ಬರ್ಮಾ ಅಡಿಕೆ ಅಕ್ರಮವಾಗಿ ಸಾಗಾಟ, ಇನ್ನೊಂದು ಕಡೆ ದೇಶದ…

16 hours ago

ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

17 hours ago