Advertisement
ಸುದ್ದಿಗಳು

ದೆಹಲಿಯಲ್ಲಿ 3.2 ಡಿಗ್ರಿ ತಾಪಮಾನ, ವಾಯು ಗುಣಮಟ್ಟ ಕಳಪೆ, ಉತ್ತರ ಭಾರತವನ್ನು ಶೀತಗಾಳಿ ಆವರಿಸಿದ್ದು, ದಟ್ಟವಾದ ಮಂಜಿನ ಎಚ್ಚರಿಕೆ ನೀಡಿದ ಐಎಂಡಿ

Share

ಚಳಿಗಾಲ ತೀವ್ರಗೊಳ್ಳುತ್ತಿರುವ ನಡುವೆಯೇ ಉತ್ತರ ಭಾರತವನ್ನು ದಟ್ಟವಾದ ಮಂಜು ಮತ್ತು ತಾಪಮಾನ ಕುಸಿತ ಕಾಡುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿ ಉತ್ತರ ಭಾರತದ ಹಲವಾರು ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಹೊಸ ಶೀತ ಅಲೆ ಎಚ್ಚರಿಕೆ ನೀಡಿದೆ.

ಜನವರಿ 12 ರ ಸೋಮವಾರ ಬಿಡುಗಡೆ ಮಾಡಿದ ಹವಾಮಾನ ಬುಲೆಟಿನ್ ಪ್ರಕಾರ, ಉತ್ತರ ಪ್ರದೇಶ, ಜಮ್ಮು–ಕಾಶ್ಮೀರ, ಹರಿಯಾಣ, ಚಂಡೀಗಢ, ದೆಹಲಿ ಹಾಗೂ ಉತ್ತರಾಖಂಡದಲ್ಲಿ ಶೀತ ಅಲೆ ಬೀಸುವ ಸಾಧ್ಯತೆ ಇದೆ. ಇದೇ ವೇಳೆ ರಾಜಸ್ಥಾನ, ಬಿಹಾರ ಮತ್ತು ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ, ಮೀಜೋರಾಂ, ತ್ರಿಪುರ, ಮಣಿಪುರ ಹಾಗೂ ನಾಗಾಲ್ಯಾಂಡ್‌ನ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜು ಮತ್ತು ಶೀತ ಅಲೆಯ ಪರಿಸ್ಥಿತಿ ಮುಂದುವರಿಯಲಿದೆ ಎಂದು ಐಎಂಡಿ ತಿಳಿಸಿದೆ.

ಹವಾಮಾನ ಇಲಾಖೆಯ ಮಾಹಿತಿಯಂತೆ, ಜನವರಿ 17, 2026 ರವರೆಗೆ ದೆಹಲಿ ಮತ್ತು ಎನ್‌ಸಿಆರ್ ಪ್ರದೇಶಗಳಲ್ಲಿ ದಟ್ಟ ಮಂಜು ಆವರಿಸುವ ನಿರೀಕ್ಷೆಯಿದೆ. ಸೋಮವಾರ ದೆಹಲಿಯ ಸಫ್ದರ್ಜಂಗ್‌ನಲ್ಲಿ ಕನಿಷ್ಠ ತಾಪಮಾನ 3.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಭಾನುವಾರ ಆಯನಗರ ಪ್ರದೇಶದಲ್ಲಿ 2.9 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿತ್ತು. ಪಾಲಂನಲ್ಲಿ ಕನಿಷ್ಠ ತಾಪಮಾನ ಸುಮಾರು 3 ಡಿಗ್ರಿಯಾಗಿದ್ದು, ಸಫ್ದರ್ಜಂಗ್‌ನಲ್ಲಿ 4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ದಟ್ಟ ಮಂಜಿನ ಪರಿಣಾಮವಾಗಿ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರಿಗೆ ವಿಶೇಷ ಸಲಹೆ ನೀಡಿದೆ. ಬೆಳಿಗ್ಗೆ 8 ಗಂಟೆಗೆ ಹೊರಡಿಸಿದ ಸೂಚನೆಯಂತೆ, ಕಡಿಮೆ ಗೋಚರತೆ ಹಿನ್ನೆಲೆಯಲ್ಲಿ ಪ್ರಯಾಣಿಕರು ತಮ್ಮ ವಿಮಾನದ ಸ್ಥಿತಿಯನ್ನು ಮುಂಚಿತವಾಗಿ ಪರಿಶೀಲಿಸುವಂತೆ ತಿಳಿಸಲಾಗಿದೆ.

ಪ್ರಸ್ತುತ ದೆಹಲಿಯಲ್ಲಿ CAT III ಷರತ್ತುಗಳನ್ನು ಜಾರಿಗೊಳಿಸಲಾಗಿದ್ದು, ಇದೇ ಷರತ್ತುಗಳ ಅಡಿಯಲ್ಲಿ ವಿಮಾನ ಸಂಚಾರ ನಡೆಯುತ್ತಿದೆ. ಇದರಿಂದಾಗಿ ವಿಮಾನಗಳ ವಿಳಂಬ ಮತ್ತು ರದ್ದು ಸಾಧ್ಯತೆ ಇದೆ. ಪ್ರಯಾಣಿಕರು ಇತ್ತೀಚಿನ ವಿಮಾನ ಮಾಹಿತಿಗಾಗಿ ತಮ್ಮ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸುವಂತೆ ಅಥವಾ ಅಧಿಕೃತ ವೆಬ್‌ಸೈಟ್‌ಗಳನ್ನು ಪರಿಶೀಲಿಸುವಂತೆ ವಿಮಾನ ನಿಲ್ದಾಣ ಅಧಿಕಾರಿಗಳು ಮನವಿ ಮಾಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

4 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

20 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago