ರಾಜ್ಯದಲ್ಲಿ ಅತಿವೃಷ್ಟಿ | ಬೆಳೆ ಹಾನಿ ಸಮೀಕ್ಷೆ | ವಾರದಲ್ಲಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

October 27, 2024
6:28 AM

ರಾಜ್ಯದಲ್ಲಿ ಹಿಂಗಾರು ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಅವರು ಈ ಬಗ್ಗೆ ಸೂಚನೆನೀಡಿದ್ದಾರೆ. ಮನೆ ಹಾನಿ ಮತ್ತ ಪ್ರಾಣಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ. ಜಾನುವಾರು ಸಾವಿಗೀಡಾದ ಪ್ರಕರಣಗಳಲ್ಲಿ ರೈತರಿಗೆ ಒಟ್ಟು 9.60 ಲಕ್ಷ ರೂಪಾಯಿ ಪರಿಹಾರ ಪಾವತಿಸಲಾಗಿದೆ. ಈ ಅವಧಿಯಲ್ಲಿ 84 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2022 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಪೂರ್ತಿ ಮನೆ ಹಾನಿಗೀಡಾದ ಪ್ರಕರಣಗಳಲ್ಲಿ 1.20 ಲಕ್ಷ ರೂಪಾಯಿ ಪರಿಹಾರ ಹಾಗೂ ಮನೆ ನಿರ್ಮಿಸಿಕೊಡಲು ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ 50 ಸಾವಿರ ರೂಪಾಯಿ ಪರಿಹಾರ ಒದಗಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror