ರಾಜ್ಯದಲ್ಲಿ ಹಿಂಗಾರು ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಅವರು ಈ ಬಗ್ಗೆ ಸೂಚನೆನೀಡಿದ್ದಾರೆ. ಮನೆ ಹಾನಿ ಮತ್ತ ಪ್ರಾಣಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ. ಜಾನುವಾರು ಸಾವಿಗೀಡಾದ ಪ್ರಕರಣಗಳಲ್ಲಿ ರೈತರಿಗೆ ಒಟ್ಟು 9.60 ಲಕ್ಷ ರೂಪಾಯಿ ಪರಿಹಾರ ಪಾವತಿಸಲಾಗಿದೆ. ಈ ಅವಧಿಯಲ್ಲಿ 84 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2022 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಪೂರ್ತಿ ಮನೆ ಹಾನಿಗೀಡಾದ ಪ್ರಕರಣಗಳಲ್ಲಿ 1.20 ಲಕ್ಷ ರೂಪಾಯಿ ಪರಿಹಾರ ಹಾಗೂ ಮನೆ ನಿರ್ಮಿಸಿಕೊಡಲು ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ 50 ಸಾವಿರ ರೂಪಾಯಿ ಪರಿಹಾರ ಒದಗಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…