ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಹಾಗೂ ಮುಕ್ತ, ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಇದೀಗ ಚುನಾವಣೆ ಘೋಷಣೆಯಾಗಿರುವ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಪರವಾನಗಿ ಪಡೆದಿರುವ ಆಯುಧಗಳನ್ನು ಠೇವಣಿ ಇಡುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಿಡ್ಪಳ್ಳಿ ಮತ್ತು ಆರ್ಯಾಪು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಮತ್ತು ಉಜಿರೆ ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಚುನಾವಣೆಗಳು ನಡೆಯಲಿವೆ. ಆದ ಕಾರಣ ಈ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಬೆಳೆ ರಕ್ಷಣೆ ಮತ್ತು ಆತ್ಮ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಪರವನಿಗೆದಾರರು ಎಲ್ಲಾ ಶಸ್ತ್ರಾಸ್ತ್ರಗಳನ್ನು 2023ರ ಜು.19ರಿಂದ ಆಗಸ್ಟ್ 1ರವರೆಗೆ ಭಾರತೀಯ ಶಸ್ತ್ರ ಕಾಯಿದೆಯಡಿ ನಮೂನೆ 8ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಅಥವಾ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಬೇಕು.
ಈ ಬಗ್ಗೆ ಯಾವುದೇ ಅಕ್ಷೇಪಣೆಗಳಿದ್ದಲ್ಲಿ ತಮ್ಮ ಬೆಳೆ ರಕ್ಷಣೆಗಾಗಿ ಆಯುಧದ ತೀರಾ ಅವಶ್ಯಕತೆ ಇದೆ ಎಂದಾದಲ್ಲಿ ಈ ಆದೇಶ ಹೊರಡಿಸಿದ ಒಂದು ವಾರದೊಳಗೆ ಪೂರಕ ದಾಖಲೆಗಳೊಂದಿಗೆ ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…