Advertisement
ಸುದ್ದಿಗಳು

ಚುನಾವಣೆ ಹಿನ್ನೆಲೆ | ಶಸ್ತ್ರಾಸ್ತ್ರಗಳ ಠೇವಣಿಗೆ ಸೂಚನೆ

Share

ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಹಾಗೂ ಮುಕ್ತ, ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಇದೀಗ ಚುನಾವಣೆ ಘೋಷಣೆಯಾಗಿರುವ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಪರವಾನಗಿ ಪಡೆದಿರುವ ಆಯುಧಗಳನ್ನು ಠೇವಣಿ ಇಡುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಿಡ್ಪಳ್ಳಿ ಮತ್ತು ಆರ್ಯಾಪು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಮತ್ತು ಉಜಿರೆ ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಚುನಾವಣೆಗಳು ನಡೆಯಲಿವೆ. ಆದ ಕಾರಣ ಈ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಬೆಳೆ ರಕ್ಷಣೆ ಮತ್ತು ಆತ್ಮ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಪರವನಿಗೆದಾರರು ಎಲ್ಲಾ ಶಸ್ತ್ರಾಸ್ತ್ರಗಳನ್ನು 2023ರ ಜು.19ರಿಂದ ಆಗಸ್ಟ್ 1ರವರೆಗೆ ಭಾರತೀಯ ಶಸ್ತ್ರ ಕಾಯಿದೆಯಡಿ ನಮೂನೆ 8ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಅಥವಾ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಬೇಕು.

ಈ ಬಗ್ಗೆ ಯಾವುದೇ ಅಕ್ಷೇಪಣೆಗಳಿದ್ದಲ್ಲಿ ತಮ್ಮ ಬೆಳೆ ರಕ್ಷಣೆಗಾಗಿ ಆಯುಧದ ತೀರಾ ಅವಶ್ಯಕತೆ ಇದೆ ಎಂದಾದಲ್ಲಿ ಈ ಆದೇಶ ಹೊರಡಿಸಿದ ಒಂದು ವಾರದೊಳಗೆ ಪೂರಕ ದಾಖಲೆಗಳೊಂದಿಗೆ ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

12 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

12 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

2 days ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

2 days ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago