ದ್ವಿತೀಯ ಪಿಯುಸಿ ಮುಗಿಸಿದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿಇಟಿ ಅತ್ಯಂತ ಮುಖ್ಯ ಘಟ್ಟ. ವಿದ್ಯಾರ್ಥಿಗಳ ಅರ್ಧ ಭವಿಷ್ಯ ಅಲ್ಲೇ ನಿರ್ಧಾರವಾಗುತ್ತದೆ. ಆದರೆ ಈ ಬಾರಿ ಸಿಇಟಿ ಬರೆದ ಕೆಲವು ವಿದ್ಯಾರ್ಥಿಗಳು ದಾಖಲಾತಿ ವಿಚಾರದಲ್ಲಿ ಕೆಲವೊಂದು ಯಡವಟ್ಟುಗಳನ್ನು ಮಾಡಿಕೊಂಡಿದ್ದಾರೆ. ಆಂತಹ ವೃತ್ತಿಪರ ಕೋರ್ಸುಗಳಿಗೆ ಪ್ರವೇಶಾತಿ ಬಯಸಿ ಸಿಇಟಿ ಬರೆದಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.
ಜಾತಿ/ಆದಾಯ/ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರಗಳ ಆರ್.ಡಿ ಸಂಖ್ಯೆಯನ್ನು (RD Number) ಆದಷ್ಟು ಬೇಗ ಸರಿಪಡಿಸಿಕೊಳ್ಳಿ. ಇಲ್ಲದಿದ್ದರೆ ಮೀಸಲಾತಿ ಸೌಲಭ್ಯಗಳು ರದ್ದಾಗಿ, ಜನರಲ್ ಮೆರಿಟ್ ಕೋಟಾದಡಿ ನೀವು ಬರಲಿದ್ದಾರೆ. ಆದ್ದರಿಂದ ಕೂಡಲೇ ಕಂದಾಯ ಇಲಾಖೆಯ ಆರ್.ಡಿ ಸಂಖ್ಯೆ ಜತೆ ತಾಳೆಯಾಗುವಂತೆ ಜೂನ್ 12ರ ಬೆಳಿಗ್ಗೆ 11 ಗಂಟೆಯ ವೇಳೆಗೆ ಸೂಕ್ತ ತಿದ್ದುಪಡಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೊಮ್ಮೆ ಹೇಳಿದೆ. ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಸಿಇಟಿ ಬರೆದಿರುವ 2.6 ಲಕ್ಷ ಅಭ್ಯರ್ಥಿಗಳ ಪೈಕಿ 80 ಸಾವಿರಕ್ಕೂ ಹೆಚ್ಚು ಮಂದಿ ಆರ್.ಡಿ ಸಂಖ್ಯೆಯನ್ನು ತಪ್ಪಾಗಿ ಅರ್ಜಿಯಲ್ಲಿ ನಮೂದಿಸಿರುವ ಹಿನ್ನೆಲೆಯಲ್ಲಿ ಪ್ರಾಧಿಕಾರವು ಅದರ ತಿದ್ದುಪಡಿಗೆ ಜೂನ್ 7ರಿಂದ 12ರವರೆಗೆ ಕೊನೆಯ ಅವಕಾಶ ನೀಡಿದೆ. ಆದರೂ ಇನ್ನೂ 30 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳ ಅರ್ಜಿಗಳಲ್ಲಿನ ದೋಷಗಳು ಹಾಗೆಯೇ ಉಳಿದುಕೊಂಡಿವೆ ಎಂದು ಅವರು ಹೇಳಿದ್ದಾರೆ.
ಇದರ ಜತೆಗೆ ಕೆಲವರು ಆದಾಯ ಪ್ರಮಾಣ ಪತ್ರದ ಬದಲು ಇಡಬ್ಲ್ಯುಎಸ್ ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ. ಸಿಇಟಿ ನಿಯಮಗಳ ಪ್ರಕಾರ ಇದಕ್ಕೆ ಮನ್ನಣೆ ಇಲ್ಲ. ಆದ್ದರಿಂದ ಅಭ್ಯರ್ಥಿಗಳು ಪ್ರಾಧಿಕಾರದ ಪೋರ್ಟಲ್ನಲ್ಲಿ ಜೂನ್ 12ರ ನಿಗದಿತ ಕಾಲಮಿತಿಯೊಳಗೆ ತಿದ್ದುಪಡಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ಪರಿಣಾಮಗಳಿಗೆ ವಿದ್ಯಾರ್ಥಿಗಳೇ ಹೊಣೆಗಾರರಾಗಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಆರ್ಡಿ ಸಂಖ್ಯೆಗಳು ತಾಳೆಯಾಗದ ಅಭ್ಯರ್ಥಿಗಳ ಹೆಸರುಗಳನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಈಗಾಗಲೇ ಈ ಸಂಖ್ಯೆಗಳನ್ನು ಕಂದಾಯ ಇಲಾಖೆಯ ಆರ್ಡಿ ಸಂಖ್ಯೆ ಜತೆ ನಮೂದಿಸುವ ಪ್ರಕ್ರಿಯೆ ನಡೆಯುತ್ತಿದೆ. ಆದ್ದರಿಂದ ಸಂಬಂಧಿಸಿದ ಅಭ್ಯರ್ಥಿಗಳು ತಿದ್ದುಪಡಿಗೆ ನೀಡಿರುವ ಕೊನೆಯ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಅವರು ಕೋರಿದ್ದಾರೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…