MIRROR FOCUS

#Cauverywater | ಮತ್ತೆ ಮತ್ತೆ ರಾಜ್ಯಕ್ಕೆ ಹೊಡೆತ ಕೊಡುತ್ತಿರುವ CWRC ಶಿಫಾರಸ್ಸು | ಅ.31 ರವರೆಗೆ ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ |

Share

ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತೆ ಮತ್ತೆ ರಾಜ್ಯಕ್ಕೆ ಮೇಲಿಂದ ಮೇಲೆ ಹೊಡೆತ ಕೊಡುತ್ತಿದೆ. ರಾಜ್ಯದ ಹಿತಾಸಕ್ತಿಯನ್ನು ಗಣನೆಗೆ ತೆಗೆದುಕೊಳ್ಳದೆ ಅಕ್ಟೋಬರ್ 16 ರಿಂದ 31ರ ವರೆಗೆ ತಮಿಳುನಾಡಿಗೆ#Tamilnadu ಪ್ರತಿ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ  ಕರ್ನಾಟಕ ಸರ್ಕಾರಕ್ಕೆ CWRC ಸೂಚನೆ ನೀಡಿದೆ.

ಕಾವೇರಿ ನದಿ ನೀರು #Cauvery River Water ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಮಹತ್ವದ ಸಭೆ ನಡೆಸಿದ ಸಮಿತಿಯು ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ ಅಂದ್ರೆ ಅಕ್ಟೋಬರ್ 16ರಿಂದ 31ರ ವರೆಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಭೆ ನಡೆಸಿದ ಸಮಿತಿಯ ಅಧ್ಯಕ್ಷ ವಿನೀತ್ ಗುಪ್ತಾ ಶಿಫಾರಸ್ಸು ಮಾಡಿದ್ದಾರೆ‌. ಇದೇ ಸೆಪ್ಟೆಂಬರ್‌ 29 ರಂದು 15 ದಿನಗಳವರೆಗೆ ಪ್ರತಿ ನಿತ್ಯ 3,000 ಕ್ಯೂಸೆಕ್‌ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ #CWMA ಆದೇಶಿಸಿತ್ತು. ಆದೇಶ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಸಿತು.
ಸಭೆಯಲ್ಲಿ ತಮಿಳುನಾಡು ಪರ ಭಾಗಿಯಾಗಿದ್ದ ಕಾವೇರಿ ತಾಂತ್ರಿಕ ಸಮಿತಿ ಅಧ್ಯಕ್ಷ ಸುಬ್ರಮಣಿಯನ್, ಮುಖ್ಯ ಎಂಜಿನಿಯರ್ ಸುಬ್ರಮಣಿಯನ್ ಮತ್ತು ಪಟ್ಟಬ್ರಮಣ್ ನಿತ್ಯ 16000 ಕ್ಯೂಸೆಕ್ ನಂತೆ ಹದಿನೈದು ದಿನಗಳ ಕಾಲ 20.75 ಟಿಎಂಸಿ ನೀರು ಹರಿಸಲು ಒತ್ತಡ ಹೇರಿತು. ಇದಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕದ ಅಧಿಕಾರಿಗಳು ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ 50% ಮಳೆಯ ಕೊರತೆ ಇದೆ. ಮುಂದಿನ ದಿನಗಳ ಮಳೆಯಾಗುವ ಯಾವುದೇ ಭರವಸೆಗಳಿಲ್ಲ ಹೀಗಾಗೀ ನೀರು ಹರಿಸಲು ಸಾಧ್ಯವಿಲ್ಲ ಎಂದರು. ಎರಡು ರಾಜ್ಯಗಳನ್ನು ವಿಶ್ವಾಸಕ್ಕೆ ಪಡೆಯಲು ಸಮಿತಿಯೂ ಹಳೆ ಆದೇಶವನ್ನು ಅಕ್ಟೋಬರ್ 31 ವರೆಗೂ ಮುಂದುವರಿಸಲು ಶಿಫಾರಸ್ಸು ಮಾಡಿತು. ಮುಂದಿನ ಒಂದೇರಡು ದಿನಗಳಲ್ಲಿ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ಸಭೆ ನಡೆಯಲಿದ್ದು ಈ ಆದೇಶ ಪ್ರಶ್ನಿಸಬಹುದಾಗಿದೆ.

– ಅಂತರ್ಜಾಲ ಮಾಹಿತಿ

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

5 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

5 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

5 hours ago

ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

13 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

13 hours ago