Advertisement
MIRROR FOCUS

#Cauverywater | ಮತ್ತೆ ಮತ್ತೆ ರಾಜ್ಯಕ್ಕೆ ಹೊಡೆತ ಕೊಡುತ್ತಿರುವ CWRC ಶಿಫಾರಸ್ಸು | ಅ.31 ರವರೆಗೆ ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ |

Share

ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತೆ ಮತ್ತೆ ರಾಜ್ಯಕ್ಕೆ ಮೇಲಿಂದ ಮೇಲೆ ಹೊಡೆತ ಕೊಡುತ್ತಿದೆ. ರಾಜ್ಯದ ಹಿತಾಸಕ್ತಿಯನ್ನು ಗಣನೆಗೆ ತೆಗೆದುಕೊಳ್ಳದೆ ಅಕ್ಟೋಬರ್ 16 ರಿಂದ 31ರ ವರೆಗೆ ತಮಿಳುನಾಡಿಗೆ#Tamilnadu ಪ್ರತಿ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ  ಕರ್ನಾಟಕ ಸರ್ಕಾರಕ್ಕೆ CWRC ಸೂಚನೆ ನೀಡಿದೆ.

ಕಾವೇರಿ ನದಿ ನೀರು #Cauvery River Water ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಮಹತ್ವದ ಸಭೆ ನಡೆಸಿದ ಸಮಿತಿಯು ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ ಅಂದ್ರೆ ಅಕ್ಟೋಬರ್ 16ರಿಂದ 31ರ ವರೆಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಭೆ ನಡೆಸಿದ ಸಮಿತಿಯ ಅಧ್ಯಕ್ಷ ವಿನೀತ್ ಗುಪ್ತಾ ಶಿಫಾರಸ್ಸು ಮಾಡಿದ್ದಾರೆ‌. ಇದೇ ಸೆಪ್ಟೆಂಬರ್‌ 29 ರಂದು 15 ದಿನಗಳವರೆಗೆ ಪ್ರತಿ ನಿತ್ಯ 3,000 ಕ್ಯೂಸೆಕ್‌ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ #CWMA ಆದೇಶಿಸಿತ್ತು. ಆದೇಶ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಸಿತು.
ಸಭೆಯಲ್ಲಿ ತಮಿಳುನಾಡು ಪರ ಭಾಗಿಯಾಗಿದ್ದ ಕಾವೇರಿ ತಾಂತ್ರಿಕ ಸಮಿತಿ ಅಧ್ಯಕ್ಷ ಸುಬ್ರಮಣಿಯನ್, ಮುಖ್ಯ ಎಂಜಿನಿಯರ್ ಸುಬ್ರಮಣಿಯನ್ ಮತ್ತು ಪಟ್ಟಬ್ರಮಣ್ ನಿತ್ಯ 16000 ಕ್ಯೂಸೆಕ್ ನಂತೆ ಹದಿನೈದು ದಿನಗಳ ಕಾಲ 20.75 ಟಿಎಂಸಿ ನೀರು ಹರಿಸಲು ಒತ್ತಡ ಹೇರಿತು. ಇದಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕದ ಅಧಿಕಾರಿಗಳು ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ 50% ಮಳೆಯ ಕೊರತೆ ಇದೆ. ಮುಂದಿನ ದಿನಗಳ ಮಳೆಯಾಗುವ ಯಾವುದೇ ಭರವಸೆಗಳಿಲ್ಲ ಹೀಗಾಗೀ ನೀರು ಹರಿಸಲು ಸಾಧ್ಯವಿಲ್ಲ ಎಂದರು. ಎರಡು ರಾಜ್ಯಗಳನ್ನು ವಿಶ್ವಾಸಕ್ಕೆ ಪಡೆಯಲು ಸಮಿತಿಯೂ ಹಳೆ ಆದೇಶವನ್ನು ಅಕ್ಟೋಬರ್ 31 ವರೆಗೂ ಮುಂದುವರಿಸಲು ಶಿಫಾರಸ್ಸು ಮಾಡಿತು. ಮುಂದಿನ ಒಂದೇರಡು ದಿನಗಳಲ್ಲಿ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ಸಭೆ ನಡೆಯಲಿದ್ದು ಈ ಆದೇಶ ಪ್ರಶ್ನಿಸಬಹುದಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

10 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

14 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

2 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

2 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

2 days ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago