ಪುತ್ತೂರಿನಲ್ಲಿ ಗೇರು ಕೃಷಿ ತರಬೇತಿ ಕಾರ್ಯಕ್ರಮ | ಗೇರು ಕೃಷಿ ತೋಟಗಾರಿಕಾ ಬೆಳೆಯಾಗಿದೆ, ಕೃಷಿಕರು ಗೇರು ಕೃಷಿಯತ್ತ ಗಮನಹರಿಸಿ |

February 13, 2023
9:22 PM

ಗೇರು ಕಾಡುಬೆಳೆಯಲ್ಲ. ಅದೊಂದು ತೋಟಗಾರಿಕಾ ಬೆಳೆಯಾಗಿದೆ. ಇತರ ತೋಟಗಾರಿಕಾ ಬೆಳೆಗಳಿಗೆ ಒದಗಿಸುವಂತಹ ಕೃಷಿ ನಿರ್ವಹಣಾ ಕ್ರಮಗಳನ್ನು ಗೇರು ಬೇಸಾಯದಲ್ಲೂ ಅಳವಡಿಸಿಕೊಂಡಲ್ಲಿ  ಗೇರು ಉತ್ಪಾದಕತೆಯಲ್ಲಿ ಗಣನೀಯವಾದ ಪ್ರಗತಿಯನ್ನು ಸಾಧಿಸಲು ಸಾಧ್ಯ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್ ಸಿ ಜಗದೀಶ್‌ ಹೇಳಿದರು.

Advertisement
Advertisement

ಅವರು ಪುತ್ತೂರು ಮೊಟ್ಟೆತ್ತಡ್ಕದ ಐಸಿಏಆರ್ -ಡಿಸಿಆರ್ ಕೇಂದ್ರದಲ್ಲಿ ಆಯೋಜಿಸಲಾಗಿರುವ ಭಾರತೀಯ ಕೃಷಿ ಸಂಶೋಧನಾ ಪರಿಷತ್ ಪ್ರಾಯೋಜಿತ ಸಮಗ್ರ ಕೀಟ ನಿರ್ವಹಣಾ ಕ್ರಮಗಳ ಪ್ರಾಮುಖ್ಯತೆಯೊಂದಿಗೆ ಸುಧಾರಿತ ಗೇರು ಉತ್ಪಾದಕತಾ ತಂತ್ರಜ್ಞಾನ ದ ಕುರಿತ ರಾಷ್ಟ್ರಮಟ್ಟದ ಒಂದು ವಾರದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಡಾ. ಹೆಚ್. ರಾಜಶೇಖರ ವಿಜ್ಞಾನಿ (ಸಸ್ಯ ರೋಗಶಾಸ್ತ್ರ), ತರಬೇತಿ ಮತ್ತು ಅದರ ಉಪಯುಕ್ತತೆಯ ಕುರಿತಂತೆ ವಿವರಿಸಿದರು. ಡಾ. ಟಿ ಎನ್, ರವಿಪ್ರಸಾದ್,ಪ್ರಧಾನ ವಿಜ್ಞಾನಿ (ಕೀಟಶಾಸ್ತ್ರ) ರವರು ತರಬೇತಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಸಂಸ್ಥೆಯ ಹಿರಿಯ ವಿಜ್ಞಾನಿ (ಕೀಟಶಾಸ್ತ್ರ)  ಡಾ. ಕೆ ವನಿತಾ ಸ್ವಾಗತಿಸಿದರು.

ಐಸಿಏಆರ್ –ಡಿಸಿಆರ್ ಸಂಸ್ಥೆಯ ನಿರ್ದೇಶಕರಾದ ಡಾ. ಜೆ. ದಿನಕರ ಅಡಿಗ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಿಂದ ತರಬೇತಿಗೆ ಸಂಬಂಧಿಸಿದ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.  ಡಾ. ವೀಣಾ ಜಿ ಎಲ್  ಕಾರ್ಯಕ್ರಮವನ್ನು ನಿರ್ವಹಿಸಿದರು. ಡಾ. ಹೆಚ್ ರಾಜಶೇಖರ್‌ ವಂದಿಸಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror