Advertisement
MIRROR FOCUS

ಪುತ್ತೂರಿನಲ್ಲಿ ಗೇರು ಕೃಷಿ ತರಬೇತಿ ಕಾರ್ಯಕ್ರಮ | ಗೇರು ಕೃಷಿ ತೋಟಗಾರಿಕಾ ಬೆಳೆಯಾಗಿದೆ, ಕೃಷಿಕರು ಗೇರು ಕೃಷಿಯತ್ತ ಗಮನಹರಿಸಿ |

Share

ಗೇರು ಕಾಡುಬೆಳೆಯಲ್ಲ. ಅದೊಂದು ತೋಟಗಾರಿಕಾ ಬೆಳೆಯಾಗಿದೆ. ಇತರ ತೋಟಗಾರಿಕಾ ಬೆಳೆಗಳಿಗೆ ಒದಗಿಸುವಂತಹ ಕೃಷಿ ನಿರ್ವಹಣಾ ಕ್ರಮಗಳನ್ನು ಗೇರು ಬೇಸಾಯದಲ್ಲೂ ಅಳವಡಿಸಿಕೊಂಡಲ್ಲಿ  ಗೇರು ಉತ್ಪಾದಕತೆಯಲ್ಲಿ ಗಣನೀಯವಾದ ಪ್ರಗತಿಯನ್ನು ಸಾಧಿಸಲು ಸಾಧ್ಯ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್ ಸಿ ಜಗದೀಶ್‌ ಹೇಳಿದರು.

ಅವರು ಪುತ್ತೂರು ಮೊಟ್ಟೆತ್ತಡ್ಕದ ಐಸಿಏಆರ್ -ಡಿಸಿಆರ್ ಕೇಂದ್ರದಲ್ಲಿ ಆಯೋಜಿಸಲಾಗಿರುವ ಭಾರತೀಯ ಕೃಷಿ ಸಂಶೋಧನಾ ಪರಿಷತ್ ಪ್ರಾಯೋಜಿತ ಸಮಗ್ರ ಕೀಟ ನಿರ್ವಹಣಾ ಕ್ರಮಗಳ ಪ್ರಾಮುಖ್ಯತೆಯೊಂದಿಗೆ ಸುಧಾರಿತ ಗೇರು ಉತ್ಪಾದಕತಾ ತಂತ್ರಜ್ಞಾನ ದ ಕುರಿತ ರಾಷ್ಟ್ರಮಟ್ಟದ ಒಂದು ವಾರದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಡಾ. ಹೆಚ್. ರಾಜಶೇಖರ ವಿಜ್ಞಾನಿ (ಸಸ್ಯ ರೋಗಶಾಸ್ತ್ರ), ತರಬೇತಿ ಮತ್ತು ಅದರ ಉಪಯುಕ್ತತೆಯ ಕುರಿತಂತೆ ವಿವರಿಸಿದರು. ಡಾ. ಟಿ ಎನ್, ರವಿಪ್ರಸಾದ್,ಪ್ರಧಾನ ವಿಜ್ಞಾನಿ (ಕೀಟಶಾಸ್ತ್ರ) ರವರು ತರಬೇತಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಸಂಸ್ಥೆಯ ಹಿರಿಯ ವಿಜ್ಞಾನಿ (ಕೀಟಶಾಸ್ತ್ರ)  ಡಾ. ಕೆ ವನಿತಾ ಸ್ವಾಗತಿಸಿದರು.

ಐಸಿಏಆರ್ –ಡಿಸಿಆರ್ ಸಂಸ್ಥೆಯ ನಿರ್ದೇಶಕರಾದ ಡಾ. ಜೆ. ದಿನಕರ ಅಡಿಗ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಿಂದ ತರಬೇತಿಗೆ ಸಂಬಂಧಿಸಿದ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.  ಡಾ. ವೀಣಾ ಜಿ ಎಲ್  ಕಾರ್ಯಕ್ರಮವನ್ನು ನಿರ್ವಹಿಸಿದರು. ಡಾ. ಹೆಚ್ ರಾಜಶೇಖರ್‌ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

10 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

10 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

13 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

17 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

17 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago