ಗೇರು ಕಾಡುಬೆಳೆಯಲ್ಲ. ಅದೊಂದು ತೋಟಗಾರಿಕಾ ಬೆಳೆಯಾಗಿದೆ. ಇತರ ತೋಟಗಾರಿಕಾ ಬೆಳೆಗಳಿಗೆ ಒದಗಿಸುವಂತಹ ಕೃಷಿ ನಿರ್ವಹಣಾ ಕ್ರಮಗಳನ್ನು ಗೇರು ಬೇಸಾಯದಲ್ಲೂ ಅಳವಡಿಸಿಕೊಂಡಲ್ಲಿ ಗೇರು ಉತ್ಪಾದಕತೆಯಲ್ಲಿ ಗಣನೀಯವಾದ ಪ್ರಗತಿಯನ್ನು ಸಾಧಿಸಲು ಸಾಧ್ಯ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್ ಸಿ ಜಗದೀಶ್ ಹೇಳಿದರು.
ಅವರು ಪುತ್ತೂರು ಮೊಟ್ಟೆತ್ತಡ್ಕದ ಐಸಿಏಆರ್ -ಡಿಸಿಆರ್ ಕೇಂದ್ರದಲ್ಲಿ ಆಯೋಜಿಸಲಾಗಿರುವ ಭಾರತೀಯ ಕೃಷಿ ಸಂಶೋಧನಾ ಪರಿಷತ್ ಪ್ರಾಯೋಜಿತ ಸಮಗ್ರ ಕೀಟ ನಿರ್ವಹಣಾ ಕ್ರಮಗಳ ಪ್ರಾಮುಖ್ಯತೆಯೊಂದಿಗೆ ಸುಧಾರಿತ ಗೇರು ಉತ್ಪಾದಕತಾ ತಂತ್ರಜ್ಞಾನ ದ ಕುರಿತ ರಾಷ್ಟ್ರಮಟ್ಟದ ಒಂದು ವಾರದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಡಾ. ಹೆಚ್. ರಾಜಶೇಖರ ವಿಜ್ಞಾನಿ (ಸಸ್ಯ ರೋಗಶಾಸ್ತ್ರ), ತರಬೇತಿ ಮತ್ತು ಅದರ ಉಪಯುಕ್ತತೆಯ ಕುರಿತಂತೆ ವಿವರಿಸಿದರು. ಡಾ. ಟಿ ಎನ್, ರವಿಪ್ರಸಾದ್,ಪ್ರಧಾನ ವಿಜ್ಞಾನಿ (ಕೀಟಶಾಸ್ತ್ರ) ರವರು ತರಬೇತಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಸಂಸ್ಥೆಯ ಹಿರಿಯ ವಿಜ್ಞಾನಿ (ಕೀಟಶಾಸ್ತ್ರ) ಡಾ. ಕೆ ವನಿತಾ ಸ್ವಾಗತಿಸಿದರು.
ಐಸಿಏಆರ್ –ಡಿಸಿಆರ್ ಸಂಸ್ಥೆಯ ನಿರ್ದೇಶಕರಾದ ಡಾ. ಜೆ. ದಿನಕರ ಅಡಿಗ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಿಂದ ತರಬೇತಿಗೆ ಸಂಬಂಧಿಸಿದ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು. ಡಾ. ವೀಣಾ ಜಿ ಎಲ್ ಕಾರ್ಯಕ್ರಮವನ್ನು ನಿರ್ವಹಿಸಿದರು. ಡಾ. ಹೆಚ್ ರಾಜಶೇಖರ್ ವಂದಿಸಿದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…