MIRROR FOCUS

ಪುತ್ತೂರಿನಲ್ಲಿ ಗೇರು ಕೃಷಿ ತರಬೇತಿ ಕಾರ್ಯಕ್ರಮ | ಗೇರು ಕೃಷಿ ತೋಟಗಾರಿಕಾ ಬೆಳೆಯಾಗಿದೆ, ಕೃಷಿಕರು ಗೇರು ಕೃಷಿಯತ್ತ ಗಮನಹರಿಸಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗೇರು ಕಾಡುಬೆಳೆಯಲ್ಲ. ಅದೊಂದು ತೋಟಗಾರಿಕಾ ಬೆಳೆಯಾಗಿದೆ. ಇತರ ತೋಟಗಾರಿಕಾ ಬೆಳೆಗಳಿಗೆ ಒದಗಿಸುವಂತಹ ಕೃಷಿ ನಿರ್ವಹಣಾ ಕ್ರಮಗಳನ್ನು ಗೇರು ಬೇಸಾಯದಲ್ಲೂ ಅಳವಡಿಸಿಕೊಂಡಲ್ಲಿ  ಗೇರು ಉತ್ಪಾದಕತೆಯಲ್ಲಿ ಗಣನೀಯವಾದ ಪ್ರಗತಿಯನ್ನು ಸಾಧಿಸಲು ಸಾಧ್ಯ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್ ಸಿ ಜಗದೀಶ್‌ ಹೇಳಿದರು.

Advertisement
Advertisement

ಅವರು ಪುತ್ತೂರು ಮೊಟ್ಟೆತ್ತಡ್ಕದ ಐಸಿಏಆರ್ -ಡಿಸಿಆರ್ ಕೇಂದ್ರದಲ್ಲಿ ಆಯೋಜಿಸಲಾಗಿರುವ ಭಾರತೀಯ ಕೃಷಿ ಸಂಶೋಧನಾ ಪರಿಷತ್ ಪ್ರಾಯೋಜಿತ ಸಮಗ್ರ ಕೀಟ ನಿರ್ವಹಣಾ ಕ್ರಮಗಳ ಪ್ರಾಮುಖ್ಯತೆಯೊಂದಿಗೆ ಸುಧಾರಿತ ಗೇರು ಉತ್ಪಾದಕತಾ ತಂತ್ರಜ್ಞಾನ ದ ಕುರಿತ ರಾಷ್ಟ್ರಮಟ್ಟದ ಒಂದು ವಾರದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಡಾ. ಹೆಚ್. ರಾಜಶೇಖರ ವಿಜ್ಞಾನಿ (ಸಸ್ಯ ರೋಗಶಾಸ್ತ್ರ), ತರಬೇತಿ ಮತ್ತು ಅದರ ಉಪಯುಕ್ತತೆಯ ಕುರಿತಂತೆ ವಿವರಿಸಿದರು. ಡಾ. ಟಿ ಎನ್, ರವಿಪ್ರಸಾದ್,ಪ್ರಧಾನ ವಿಜ್ಞಾನಿ (ಕೀಟಶಾಸ್ತ್ರ) ರವರು ತರಬೇತಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಸಂಸ್ಥೆಯ ಹಿರಿಯ ವಿಜ್ಞಾನಿ (ಕೀಟಶಾಸ್ತ್ರ)  ಡಾ. ಕೆ ವನಿತಾ ಸ್ವಾಗತಿಸಿದರು.

ಐಸಿಏಆರ್ –ಡಿಸಿಆರ್ ಸಂಸ್ಥೆಯ ನಿರ್ದೇಶಕರಾದ ಡಾ. ಜೆ. ದಿನಕರ ಅಡಿಗ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಿಂದ ತರಬೇತಿಗೆ ಸಂಬಂಧಿಸಿದ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.  ಡಾ. ವೀಣಾ ಜಿ ಎಲ್  ಕಾರ್ಯಕ್ರಮವನ್ನು ನಿರ್ವಹಿಸಿದರು. ಡಾ. ಹೆಚ್ ರಾಜಶೇಖರ್‌ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾರದ ಅತಿಥಿ | ಮರ ಬಳಸದೆಯೇ ಮನೆ ನಿರ್ಮಾಣ, “ದ್ವಾರಕಾ”ದಿಂದ ಪರಿಸರಕ್ಕೊಂದು ಕೊಡುಗೆ

ಕಳೆದ ಸುಮಾರು 5-6 ವರ್ಷಗಳಿಂದ ಮನೆಗಳಿಗೆ ಮರ ಬಳಕೆ ಮಾಡುತ್ತಿಲ್ಲ. ಈಗಾಗಲೇ ಸುಮಾರು…

2 hours ago

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…

20 hours ago

ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |

ರಾಜ್ಯದ ಮಾವು  ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ   ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ…

20 hours ago

ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ

ಭಾರತದ ಕಾಫಿ ರಫ್ತು ಕಳೆದ 5 ವರ್ಷದಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದ್ದು, ಶೇಕಡ…

20 hours ago

ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?

ಮೊನ್ನೆ ತಾನೆ ಆತ್ಮೀಯ ಮಿತ್ರರೊಬ್ಬರ ಮನೆಗೆ ಹೋಗಿದ್ದೆ. ಮನೆಯ ಹಟ್ಟಿಯಲ್ಲಿ ದೇವನಿ ಜಾತಿಯ…

21 hours ago