Advertisement
MIRROR FOCUS

ಪುತ್ತೂರಿನಲ್ಲಿ ಗೇರು ಕೃಷಿ ತರಬೇತಿ ಕಾರ್ಯಕ್ರಮ | ಗೇರು ಕೃಷಿ ತೋಟಗಾರಿಕಾ ಬೆಳೆಯಾಗಿದೆ, ಕೃಷಿಕರು ಗೇರು ಕೃಷಿಯತ್ತ ಗಮನಹರಿಸಿ |

Share

ಗೇರು ಕಾಡುಬೆಳೆಯಲ್ಲ. ಅದೊಂದು ತೋಟಗಾರಿಕಾ ಬೆಳೆಯಾಗಿದೆ. ಇತರ ತೋಟಗಾರಿಕಾ ಬೆಳೆಗಳಿಗೆ ಒದಗಿಸುವಂತಹ ಕೃಷಿ ನಿರ್ವಹಣಾ ಕ್ರಮಗಳನ್ನು ಗೇರು ಬೇಸಾಯದಲ್ಲೂ ಅಳವಡಿಸಿಕೊಂಡಲ್ಲಿ  ಗೇರು ಉತ್ಪಾದಕತೆಯಲ್ಲಿ ಗಣನೀಯವಾದ ಪ್ರಗತಿಯನ್ನು ಸಾಧಿಸಲು ಸಾಧ್ಯ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್ ಸಿ ಜಗದೀಶ್‌ ಹೇಳಿದರು.

ಅವರು ಪುತ್ತೂರು ಮೊಟ್ಟೆತ್ತಡ್ಕದ ಐಸಿಏಆರ್ -ಡಿಸಿಆರ್ ಕೇಂದ್ರದಲ್ಲಿ ಆಯೋಜಿಸಲಾಗಿರುವ ಭಾರತೀಯ ಕೃಷಿ ಸಂಶೋಧನಾ ಪರಿಷತ್ ಪ್ರಾಯೋಜಿತ ಸಮಗ್ರ ಕೀಟ ನಿರ್ವಹಣಾ ಕ್ರಮಗಳ ಪ್ರಾಮುಖ್ಯತೆಯೊಂದಿಗೆ ಸುಧಾರಿತ ಗೇರು ಉತ್ಪಾದಕತಾ ತಂತ್ರಜ್ಞಾನ ದ ಕುರಿತ ರಾಷ್ಟ್ರಮಟ್ಟದ ಒಂದು ವಾರದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಡಾ. ಹೆಚ್. ರಾಜಶೇಖರ ವಿಜ್ಞಾನಿ (ಸಸ್ಯ ರೋಗಶಾಸ್ತ್ರ), ತರಬೇತಿ ಮತ್ತು ಅದರ ಉಪಯುಕ್ತತೆಯ ಕುರಿತಂತೆ ವಿವರಿಸಿದರು. ಡಾ. ಟಿ ಎನ್, ರವಿಪ್ರಸಾದ್,ಪ್ರಧಾನ ವಿಜ್ಞಾನಿ (ಕೀಟಶಾಸ್ತ್ರ) ರವರು ತರಬೇತಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಸಂಸ್ಥೆಯ ಹಿರಿಯ ವಿಜ್ಞಾನಿ (ಕೀಟಶಾಸ್ತ್ರ)  ಡಾ. ಕೆ ವನಿತಾ ಸ್ವಾಗತಿಸಿದರು.

ಐಸಿಏಆರ್ –ಡಿಸಿಆರ್ ಸಂಸ್ಥೆಯ ನಿರ್ದೇಶಕರಾದ ಡಾ. ಜೆ. ದಿನಕರ ಅಡಿಗ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಿಂದ ತರಬೇತಿಗೆ ಸಂಬಂಧಿಸಿದ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.  ಡಾ. ವೀಣಾ ಜಿ ಎಲ್  ಕಾರ್ಯಕ್ರಮವನ್ನು ನಿರ್ವಹಿಸಿದರು. ಡಾ. ಹೆಚ್ ರಾಜಶೇಖರ್‌ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 hour ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

2 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

3 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

6 hours ago