Advertisement
MIRROR FOCUS

ಪುತ್ತೂರಿನಲ್ಲಿ ಗೇರು ಕೃಷಿ ತರಬೇತಿ ಕಾರ್ಯಕ್ರಮ | ಗೇರು ಕೃಷಿ ತೋಟಗಾರಿಕಾ ಬೆಳೆಯಾಗಿದೆ, ಕೃಷಿಕರು ಗೇರು ಕೃಷಿಯತ್ತ ಗಮನಹರಿಸಿ |

Share

ಗೇರು ಕಾಡುಬೆಳೆಯಲ್ಲ. ಅದೊಂದು ತೋಟಗಾರಿಕಾ ಬೆಳೆಯಾಗಿದೆ. ಇತರ ತೋಟಗಾರಿಕಾ ಬೆಳೆಗಳಿಗೆ ಒದಗಿಸುವಂತಹ ಕೃಷಿ ನಿರ್ವಹಣಾ ಕ್ರಮಗಳನ್ನು ಗೇರು ಬೇಸಾಯದಲ್ಲೂ ಅಳವಡಿಸಿಕೊಂಡಲ್ಲಿ  ಗೇರು ಉತ್ಪಾದಕತೆಯಲ್ಲಿ ಗಣನೀಯವಾದ ಪ್ರಗತಿಯನ್ನು ಸಾಧಿಸಲು ಸಾಧ್ಯ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್ ಸಿ ಜಗದೀಶ್‌ ಹೇಳಿದರು.

Advertisement
Advertisement

ಅವರು ಪುತ್ತೂರು ಮೊಟ್ಟೆತ್ತಡ್ಕದ ಐಸಿಏಆರ್ -ಡಿಸಿಆರ್ ಕೇಂದ್ರದಲ್ಲಿ ಆಯೋಜಿಸಲಾಗಿರುವ ಭಾರತೀಯ ಕೃಷಿ ಸಂಶೋಧನಾ ಪರಿಷತ್ ಪ್ರಾಯೋಜಿತ ಸಮಗ್ರ ಕೀಟ ನಿರ್ವಹಣಾ ಕ್ರಮಗಳ ಪ್ರಾಮುಖ್ಯತೆಯೊಂದಿಗೆ ಸುಧಾರಿತ ಗೇರು ಉತ್ಪಾದಕತಾ ತಂತ್ರಜ್ಞಾನ ದ ಕುರಿತ ರಾಷ್ಟ್ರಮಟ್ಟದ ಒಂದು ವಾರದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Advertisement

ಡಾ. ಹೆಚ್. ರಾಜಶೇಖರ ವಿಜ್ಞಾನಿ (ಸಸ್ಯ ರೋಗಶಾಸ್ತ್ರ), ತರಬೇತಿ ಮತ್ತು ಅದರ ಉಪಯುಕ್ತತೆಯ ಕುರಿತಂತೆ ವಿವರಿಸಿದರು. ಡಾ. ಟಿ ಎನ್, ರವಿಪ್ರಸಾದ್,ಪ್ರಧಾನ ವಿಜ್ಞಾನಿ (ಕೀಟಶಾಸ್ತ್ರ) ರವರು ತರಬೇತಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಸಂಸ್ಥೆಯ ಹಿರಿಯ ವಿಜ್ಞಾನಿ (ಕೀಟಶಾಸ್ತ್ರ)  ಡಾ. ಕೆ ವನಿತಾ ಸ್ವಾಗತಿಸಿದರು.

ಐಸಿಏಆರ್ –ಡಿಸಿಆರ್ ಸಂಸ್ಥೆಯ ನಿರ್ದೇಶಕರಾದ ಡಾ. ಜೆ. ದಿನಕರ ಅಡಿಗ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಿಂದ ತರಬೇತಿಗೆ ಸಂಬಂಧಿಸಿದ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.  ಡಾ. ವೀಣಾ ಜಿ ಎಲ್  ಕಾರ್ಯಕ್ರಮವನ್ನು ನಿರ್ವಹಿಸಿದರು. ಡಾ. ಹೆಚ್ ರಾಜಶೇಖರ್‌ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?

ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…

5 hours ago

Karnataka Weather | 15-05-2024 | ಸದ್ಯ ಮಳೆ ಇದೆ | ಮೇ.21 ರಿಂದ ಮಳೆ ತೀವ್ರತೆ ಕಡಿಮೆ | ಅವಧಿಗೆ ಮುಂಗಾರು ಪ್ರಾರಂಭವಾದೀತೇ..?

ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು…

8 hours ago

ಶಂಕರರ ಆಕ್ರೋಶಕ್ಕೆ ಹೊರಹೊಮ್ಮಿದ ಭಜಗೋವಿಂದಂ

ಸನಾತನ ಭಾರತದ ಆಧ್ಯಾತ್ಮಕ ಸಾಧನೆಯ ಪುನರುತ್ಥಾನದ ಅಧ್ವರ್ಯುಗಳಲ್ಲಿ ಶಂಕರಾಚಾರ್ಯರು ಮೊದಲಿಗರು. ಹಾಗಾಗಿಯೇ ಅವರು…

8 hours ago

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

22 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

23 hours ago