ಭಾರತದ ಸ್ವಾತಂತ್ರ್ಯದ 75 ವರ್ಷಗಳ ಸ್ಮರಣಾರ್ಥ ಆಯೋಜಿಸಲಾಗುತ್ತಿರುವ ಆಜಾದಿಕಾ ಅಮೃತ ಮಹೋತ್ಸವ ಅಭಿಯಾನದ ಭಾಗವಾಗಿ ರಾಷ್ಟ್ರವ್ಯಾಪಿ ಅಭಿಯಾನವನ್ನು ಪ್ರಾರಂಭಿಸಿದೆ. ಈ ಅಭಿಯಾನವನ್ನು ಏಪ್ರಿಲ್2 5- 30 ವರೆಗೆ ದೇಶದಾದ್ಯಂತ ಆಯೋಜಿಸಲಾಗಿದೆ. ಇದರ ಅಂಗವಾಗಿ ಪುತ್ತೂರಿನಲ್ಲಿರುವ ಗೇರು ಸಂಶೋಧನಾ ನಿರ್ದೇಶನಾಲಯ ರೈತರಿಗಾಗಿ “ಜೈವಿಕ ಸಾರವರ್ಧನೆಯ ಮೂಲಕ ಪೌಷ್ಟಿಕಾಂಶ ಭದ್ರತೆ”ಎಂಬ ವಿಷಯದ ಕುರಿತು ವೆಬಿನಾರ್ ಆಯೋಜನೆ ಮಾಡಿತು.
ದೇಶದ ರೈತ ಸಮುದಾಯವನ್ನು ಬೆಂಬಲಿಸಲು ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳು ಸರಣಿ ಚಟುವಟಿಕೆಗಳನ್ನು ಕೈಗೊಂಡಿವೆ. ಇದರ ಅಂಗವಾಗಿ ವಿವಿಧ ರೈತ ಸ್ನೇಹಿ ಕಾರ್ಯಕ್ರಮಗಳು ಆಯೋಜನೆಯಾಗುತ್ತಿವೆ. ಜೈವಿಕ ಸಾರವರ್ಧನೆಯ ಮೂಲಕ ಪೌಷ್ಟಿಕಾಂಶ ಭದ್ರತೆ” ವೆಬಿನಾರ್ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಭಾರ ನಿರ್ದೇಶಕರಾದ ಡಾ. ಟಿಎನ್ ವಿ ಪ್ರಸಾದ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಐಸಿಎಆರ್-ಈರುಳ್ಳಿ ಮತ್ತು ಬೆಳ್ಳುಳ್ಳಿ ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿ ಡಾ.ರಾಜ ಕುಮಾರ್ , ಅವರು ಜೈವಿಕ ಸಾರವರ್ಧನೆಯ ಅಗತ್ಯತೆ, ಅದನ್ನು ಸಾಧಿಸುವವಿ ಧಾನಗಳು, ಆಹಾರ ಭದ್ರತೆ ಸಮಸ್ಯೆಗಳನ್ನು ಹೇಗೆ ಪರಿಹರಿಸಬಹುದು ಎಂದು ಮಾಹಿತಿಪೂರ್ಣ ವಿವರಣೆ ನೀಡಿದರು ಮತ್ತು ಕೆಲವು ಯಶೋಗಾಥೆಗಳನ್ನು ಹಂಚಿಕೊಂಡರು. ಆ
ವಿಜ್ಞಾನಿ ಡಾ.ಅಶ್ವತಿಚಂದ್ರಕುಮಾರ್ ವಂದಿಸಿದರು.
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…