ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ ಸೆಲೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ತಿಳಿಸಿದ್ದಾರೆ.
ಬಾಗಲಕೋಟೆ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಎನ್ಆರ್ ಎಲ್ಎಮ್ ಯೋಜನೆಯಡಿ ಮಹಿಳಾ ಉದ್ಯಮಿದಾರರ ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ತಮ್ಮಲ್ಲಿರುವ ಶಕ್ತಿಯನ್ನು ಅರ್ಥಮಾಡಿಕೊಂಡು ಅದನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡಲ್ಲಿ ದೇಶ, ರಾಜ್ಯ ಗ್ರಾಮ ಮತ್ತು ಕುಟುಂಬಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಮಹಿಳೆಯರು ಸ್ವಾವಲಂಬಿಗಳಾಗಲು ಎನ್ಆರ್ ಎಲ್ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಮಹಿಳಾ ಸ್ವ ಸಹಾಯ ಗುಂಪುಗಳಿಂದ ಈಗಾಗಲೇ 5 ಮೊಬೈಲ್ ಕ್ಯಾಂಟೀನ್ ತೆಗೆಯಲಾಗಿದ್ದು ಎಲ್ಲವೂ ಚೆನ್ನಾಗಿ ನಡೆಯುತ್ತಿವೆ, ಜಮಖಂಡಿಯಲ್ಲಿ ಸೂಪರ್ ಮಾರ್ಕೆಟ್ ತೆಗೆಯಾಗಿದ್ದು ಇತರ ಪ್ರಮುಖ ಸ್ಥಳಗಳಲ್ಲಿ ಸೂಪರ ಮಾರ್ಕೇಟ್ ತೆರೆಯಲು ಸ್ಥಳ ಗುರುತಿಸಲಾಗುತ್ತಿದೆ. ಶೀಘ್ರದಲ್ಲಿ ಪ್ರಾರಂಬಿಸಲಾಗುವುದು ಅಲ್ಲದೇ ಈ ಯೋಜನೆಯಡಿ ಅಕ್ಕಾ ಕೆಫೆ ತೆರೆಯುವ ಉದ್ದೇಶವಿದ್ದು ಮುಂದಿನ 15 ದಿನಗಳಲ್ಲಿ ಪ್ರಾರಂಬಿಸಲಾಗುವುದು. ಪ್ರತಿ ಗ್ರಾಮ ಪಂಚಾಯತಿಗೆ ಒಂದು ಕ್ಯಾಂಟೀನ್ ತೆರೆಯುಲು ಕ್ರಮ ಕೈಗೊಳ್ಳಲಾಗುತ್ತಿದ್ದು ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…