ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ ಸೆಲೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ತಿಳಿಸಿದ್ದಾರೆ.
ಬಾಗಲಕೋಟೆ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಎನ್ಆರ್ ಎಲ್ಎಮ್ ಯೋಜನೆಯಡಿ ಮಹಿಳಾ ಉದ್ಯಮಿದಾರರ ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ತಮ್ಮಲ್ಲಿರುವ ಶಕ್ತಿಯನ್ನು ಅರ್ಥಮಾಡಿಕೊಂಡು ಅದನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡಲ್ಲಿ ದೇಶ, ರಾಜ್ಯ ಗ್ರಾಮ ಮತ್ತು ಕುಟುಂಬಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಮಹಿಳೆಯರು ಸ್ವಾವಲಂಬಿಗಳಾಗಲು ಎನ್ಆರ್ ಎಲ್ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಮಹಿಳಾ ಸ್ವ ಸಹಾಯ ಗುಂಪುಗಳಿಂದ ಈಗಾಗಲೇ 5 ಮೊಬೈಲ್ ಕ್ಯಾಂಟೀನ್ ತೆಗೆಯಲಾಗಿದ್ದು ಎಲ್ಲವೂ ಚೆನ್ನಾಗಿ ನಡೆಯುತ್ತಿವೆ, ಜಮಖಂಡಿಯಲ್ಲಿ ಸೂಪರ್ ಮಾರ್ಕೆಟ್ ತೆಗೆಯಾಗಿದ್ದು ಇತರ ಪ್ರಮುಖ ಸ್ಥಳಗಳಲ್ಲಿ ಸೂಪರ ಮಾರ್ಕೇಟ್ ತೆರೆಯಲು ಸ್ಥಳ ಗುರುತಿಸಲಾಗುತ್ತಿದೆ. ಶೀಘ್ರದಲ್ಲಿ ಪ್ರಾರಂಬಿಸಲಾಗುವುದು ಅಲ್ಲದೇ ಈ ಯೋಜನೆಯಡಿ ಅಕ್ಕಾ ಕೆಫೆ ತೆರೆಯುವ ಉದ್ದೇಶವಿದ್ದು ಮುಂದಿನ 15 ದಿನಗಳಲ್ಲಿ ಪ್ರಾರಂಬಿಸಲಾಗುವುದು. ಪ್ರತಿ ಗ್ರಾಮ ಪಂಚಾಯತಿಗೆ ಒಂದು ಕ್ಯಾಂಟೀನ್ ತೆರೆಯುಲು ಕ್ರಮ ಕೈಗೊಳ್ಳಲಾಗುತ್ತಿದ್ದು ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…