ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ ಸೆಲೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ತಿಳಿಸಿದ್ದಾರೆ.
ಬಾಗಲಕೋಟೆ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಎನ್ಆರ್ ಎಲ್ಎಮ್ ಯೋಜನೆಯಡಿ ಮಹಿಳಾ ಉದ್ಯಮಿದಾರರ ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ತಮ್ಮಲ್ಲಿರುವ ಶಕ್ತಿಯನ್ನು ಅರ್ಥಮಾಡಿಕೊಂಡು ಅದನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡಲ್ಲಿ ದೇಶ, ರಾಜ್ಯ ಗ್ರಾಮ ಮತ್ತು ಕುಟುಂಬಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಮಹಿಳೆಯರು ಸ್ವಾವಲಂಬಿಗಳಾಗಲು ಎನ್ಆರ್ ಎಲ್ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಮಹಿಳಾ ಸ್ವ ಸಹಾಯ ಗುಂಪುಗಳಿಂದ ಈಗಾಗಲೇ 5 ಮೊಬೈಲ್ ಕ್ಯಾಂಟೀನ್ ತೆಗೆಯಲಾಗಿದ್ದು ಎಲ್ಲವೂ ಚೆನ್ನಾಗಿ ನಡೆಯುತ್ತಿವೆ, ಜಮಖಂಡಿಯಲ್ಲಿ ಸೂಪರ್ ಮಾರ್ಕೆಟ್ ತೆಗೆಯಾಗಿದ್ದು ಇತರ ಪ್ರಮುಖ ಸ್ಥಳಗಳಲ್ಲಿ ಸೂಪರ ಮಾರ್ಕೇಟ್ ತೆರೆಯಲು ಸ್ಥಳ ಗುರುತಿಸಲಾಗುತ್ತಿದೆ. ಶೀಘ್ರದಲ್ಲಿ ಪ್ರಾರಂಬಿಸಲಾಗುವುದು ಅಲ್ಲದೇ ಈ ಯೋಜನೆಯಡಿ ಅಕ್ಕಾ ಕೆಫೆ ತೆರೆಯುವ ಉದ್ದೇಶವಿದ್ದು ಮುಂದಿನ 15 ದಿನಗಳಲ್ಲಿ ಪ್ರಾರಂಬಿಸಲಾಗುವುದು. ಪ್ರತಿ ಗ್ರಾಮ ಪಂಚಾಯತಿಗೆ ಒಂದು ಕ್ಯಾಂಟೀನ್ ತೆರೆಯುಲು ಕ್ರಮ ಕೈಗೊಳ್ಳಲಾಗುತ್ತಿದ್ದು ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…