Advertisement
ಸುದ್ದಿಗಳು

ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯಲ್ಲಿ ಅಂತರ್‌ ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾಟ | ಉಬರ್‌ ಚೆಸ್‌ ಟ್ರೋಫಿ |

Share

ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಉಪ್ಪಿನಂಗಡಿ  ಉಬರ್‌ ಚೆಸ್‌ ಅಕಾಡೆಮಿ ವತಿಯಿಂದ  ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಸಹಕಾರದೊಂದಿಗೆ ಅಂತರ್‌ ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾಟವು ಭಾನುವಾರ ನಡೆಯಿತು.

Advertisement
Advertisement

ಪಂದ್ಯಾಟವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್‌ ರಾಮ್‌ ಸುಳ್ಳಿ ಉದ್ಘಾಟಿಸಿ, ಗ್ರಾಮೀಣ ಭಾಗದಲ್ಲೂ ಚೆಸ್ ಸ್ಫರ್ಧೆ ಏರ್ಪಡಿಸುವುದು ಉತ್ತಮ ಬೆಳವಣಿಗೆಯಾಗಿದೆ. ಚೆಸ್ ಆಟದ ಮೂಲಕ ಮಕ್ಕಳ ಬುದ್ಧಿಮತ್ತೆ ಹೆಚ್ಚಳವಾಗಬಹುದಾಗಿದೆ. ಆಡಳಿತಾತ್ಮಕ ಹಾಗೂ ಬದುಕು ಶಿಸ್ತಿನ ಮೂಲಕ ಸಾಗಲು ಸಾಧ್ಯವಿದೆ ಎಂದರು.

ಸಭಾಧ್ಯಕ್ಷತೆಯನ್ನು ವಹಿಸಿದ್ದ ಅನುಗ್ರಹ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಗಣೇಶ್‌ ಪ್ರಸಾದ್‌ ನಾಯರ್‌ ಮಾತನಾಡಿ, ಚೆಸ್‌ ಮೂಲಕ ವಿದ್ಯಾರ್ಥಿಗಳ ಬುದ್ದಿ ಚುರುಕಾಗುತ್ತದೆ. ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಚೆಸ್‌ ಬೆಳೆಯುತ್ತಿದೆ. ಇದಕ್ಕಾಗಿ ಗ್ರಾಮೀಣ ಭಾಗದಿಂದಲೂ ಪ್ರತಿಭೆಗಳಿಗೆ ಬೆಳೆಯಲು ಅವಕಾಶ ಕಲ್ಪಿಸಲಾಗುತ್ತದೆ ಎಂದರು.

ಅತಿಥಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಅಧ್ಯಕ್ಷ ರಮೇಶ್‌ ಕೋಟೆ ಮಾತನಾಡಿ, ಎಲ್ಲಾ ಮಕ್ಕಳು ಸಮರ್ಥರಿರುತ್ತಾರೆ. ಚೆಸ್ ಸ್ಫರ್ಧೆ‌ ಎಲ್ಲಾ ಸ್ಫರ್ಧೆಗಳ ಮಾದರಿ ಅಲ್ಲ. ಇಲ್ಲಿ ಗೆಲುವು ಮಾತ್ರವೇ ಮುಖ್ಯವಲ್ಲ, ಚುರುಕು ಹಾಗೂ ಬೆಳವಣಿಗೆ ಮುಖ್ಯ ಎಂದರು.

ವೇದಿಕೆಯಲ್ಲಿ ಕುಮಾರಸ್ವಾಮಿ ವಿದ್ಯಾಲಯದ ಸಂಚಾಲಕ ಚಂದ್ರಶೇಖರ ನಾಯರ್‌, ಅನುಗ್ರಹ ಎಜುಕೇಶನ್‌ ಟ್ರಸ್ಟ್‌ ಉಪಾಧ್ಯಕ್ಷ ಶಿವರಾಮ ಏನೆಕಲ್ಲು, ಕುಮಾರಸ್ವಾಮಿ ವಿದ್ಯಾಲಯದ ಮುಖ್ಯಶಿಕ್ಷಕಿ ವಿದ್ಯಾರತ್ನ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಭಾರತಿ ದಿನೇಶ್‌, ಸಾಮಾಜಿಕ ಕಾರ್ಯಕರ್ತ, ಸಮಾಜಸೇವಾ  ಟ್ರಸ್ಟ್‌ ಅಧ್ಯಕ್ಷ ರವಿ ಕಕ್ಕೆಪದವು ಉಪಸ್ಥಿತರಿದ್ದರು.

ಉಬರ್‌ ಚೆಸ್‌ ಎಸೋಸಿಯೇಶನ್‌ ನಿರ್ದೇಶಕ ಜಗನ್ನಾಥ್‌ ಅಡಪ ಸ್ವಾಗತಿಸಿ ಪ್ರಸ್ತಾವನೆಗೈದರು. ಶಿಕ್ಷಕ ಯೋಗನಾಥ್‌ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭ ರಾಜ್ಯ ಮಟ್ಟದ ಚೆಸ್‌ ಸ್ಫರ್ಧೆಯಲ್ಲಿ ಭಾಗವಹಿಸಿದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಪೂರ್ವಿ ಅವರನ್ನು ಗೌರವಿಸಲಾಯಿತು.

ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಪೂರ್ವಿ ಅವರನ್ನು ಗೌರವಿಸಲಾಯಿತು
Inter-district level chess tournament was held on Sunday at Kumaraswamy Vidyalaya in Kukke Subrahmanya. By Uber Chess Academy, in collaboration with Dakshina Kannada District Chess Association.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

7 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

7 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago