Advertisement
ಸುದ್ದಿಗಳು

ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯಲ್ಲಿ ಅಂತರ್‌ ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾಟ | ಉಬರ್‌ ಚೆಸ್‌ ಟ್ರೋಫಿ |

Share

ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಉಪ್ಪಿನಂಗಡಿ  ಉಬರ್‌ ಚೆಸ್‌ ಅಕಾಡೆಮಿ ವತಿಯಿಂದ  ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಸಹಕಾರದೊಂದಿಗೆ ಅಂತರ್‌ ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾಟವು ಭಾನುವಾರ ನಡೆಯಿತು.

ಪಂದ್ಯಾಟವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್‌ ರಾಮ್‌ ಸುಳ್ಳಿ ಉದ್ಘಾಟಿಸಿ, ಗ್ರಾಮೀಣ ಭಾಗದಲ್ಲೂ ಚೆಸ್ ಸ್ಫರ್ಧೆ ಏರ್ಪಡಿಸುವುದು ಉತ್ತಮ ಬೆಳವಣಿಗೆಯಾಗಿದೆ. ಚೆಸ್ ಆಟದ ಮೂಲಕ ಮಕ್ಕಳ ಬುದ್ಧಿಮತ್ತೆ ಹೆಚ್ಚಳವಾಗಬಹುದಾಗಿದೆ. ಆಡಳಿತಾತ್ಮಕ ಹಾಗೂ ಬದುಕು ಶಿಸ್ತಿನ ಮೂಲಕ ಸಾಗಲು ಸಾಧ್ಯವಿದೆ ಎಂದರು.

ಸಭಾಧ್ಯಕ್ಷತೆಯನ್ನು ವಹಿಸಿದ್ದ ಅನುಗ್ರಹ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಗಣೇಶ್‌ ಪ್ರಸಾದ್‌ ನಾಯರ್‌ ಮಾತನಾಡಿ, ಚೆಸ್‌ ಮೂಲಕ ವಿದ್ಯಾರ್ಥಿಗಳ ಬುದ್ದಿ ಚುರುಕಾಗುತ್ತದೆ. ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಚೆಸ್‌ ಬೆಳೆಯುತ್ತಿದೆ. ಇದಕ್ಕಾಗಿ ಗ್ರಾಮೀಣ ಭಾಗದಿಂದಲೂ ಪ್ರತಿಭೆಗಳಿಗೆ ಬೆಳೆಯಲು ಅವಕಾಶ ಕಲ್ಪಿಸಲಾಗುತ್ತದೆ ಎಂದರು.

ಅತಿಥಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಅಧ್ಯಕ್ಷ ರಮೇಶ್‌ ಕೋಟೆ ಮಾತನಾಡಿ, ಎಲ್ಲಾ ಮಕ್ಕಳು ಸಮರ್ಥರಿರುತ್ತಾರೆ. ಚೆಸ್ ಸ್ಫರ್ಧೆ‌ ಎಲ್ಲಾ ಸ್ಫರ್ಧೆಗಳ ಮಾದರಿ ಅಲ್ಲ. ಇಲ್ಲಿ ಗೆಲುವು ಮಾತ್ರವೇ ಮುಖ್ಯವಲ್ಲ, ಚುರುಕು ಹಾಗೂ ಬೆಳವಣಿಗೆ ಮುಖ್ಯ ಎಂದರು.

ವೇದಿಕೆಯಲ್ಲಿ ಕುಮಾರಸ್ವಾಮಿ ವಿದ್ಯಾಲಯದ ಸಂಚಾಲಕ ಚಂದ್ರಶೇಖರ ನಾಯರ್‌, ಅನುಗ್ರಹ ಎಜುಕೇಶನ್‌ ಟ್ರಸ್ಟ್‌ ಉಪಾಧ್ಯಕ್ಷ ಶಿವರಾಮ ಏನೆಕಲ್ಲು, ಕುಮಾರಸ್ವಾಮಿ ವಿದ್ಯಾಲಯದ ಮುಖ್ಯಶಿಕ್ಷಕಿ ವಿದ್ಯಾರತ್ನ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಭಾರತಿ ದಿನೇಶ್‌, ಸಾಮಾಜಿಕ ಕಾರ್ಯಕರ್ತ, ಸಮಾಜಸೇವಾ  ಟ್ರಸ್ಟ್‌ ಅಧ್ಯಕ್ಷ ರವಿ ಕಕ್ಕೆಪದವು ಉಪಸ್ಥಿತರಿದ್ದರು.

ಉಬರ್‌ ಚೆಸ್‌ ಎಸೋಸಿಯೇಶನ್‌ ನಿರ್ದೇಶಕ ಜಗನ್ನಾಥ್‌ ಅಡಪ ಸ್ವಾಗತಿಸಿ ಪ್ರಸ್ತಾವನೆಗೈದರು. ಶಿಕ್ಷಕ ಯೋಗನಾಥ್‌ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭ ರಾಜ್ಯ ಮಟ್ಟದ ಚೆಸ್‌ ಸ್ಫರ್ಧೆಯಲ್ಲಿ ಭಾಗವಹಿಸಿದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಪೂರ್ವಿ ಅವರನ್ನು ಗೌರವಿಸಲಾಯಿತು.

ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಪೂರ್ವಿ ಅವರನ್ನು ಗೌರವಿಸಲಾಯಿತು
Inter-district level chess tournament was held on Sunday at Kumaraswamy Vidyalaya in Kukke Subrahmanya. By Uber Chess Academy, in collaboration with Dakshina Kannada District Chess Association.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

3 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

4 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

5 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

6 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

18 hours ago