Advertisement
ಸುದ್ದಿಗಳು

ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯಲ್ಲಿ ಅಂತರ್‌ ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾಟ | ಉಬರ್‌ ಚೆಸ್‌ ಟ್ರೋಫಿ |

Share

ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಉಪ್ಪಿನಂಗಡಿ  ಉಬರ್‌ ಚೆಸ್‌ ಅಕಾಡೆಮಿ ವತಿಯಿಂದ  ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಸಹಕಾರದೊಂದಿಗೆ ಅಂತರ್‌ ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾಟವು ಭಾನುವಾರ ನಡೆಯಿತು.

ಪಂದ್ಯಾಟವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್‌ ರಾಮ್‌ ಸುಳ್ಳಿ ಉದ್ಘಾಟಿಸಿ, ಗ್ರಾಮೀಣ ಭಾಗದಲ್ಲೂ ಚೆಸ್ ಸ್ಫರ್ಧೆ ಏರ್ಪಡಿಸುವುದು ಉತ್ತಮ ಬೆಳವಣಿಗೆಯಾಗಿದೆ. ಚೆಸ್ ಆಟದ ಮೂಲಕ ಮಕ್ಕಳ ಬುದ್ಧಿಮತ್ತೆ ಹೆಚ್ಚಳವಾಗಬಹುದಾಗಿದೆ. ಆಡಳಿತಾತ್ಮಕ ಹಾಗೂ ಬದುಕು ಶಿಸ್ತಿನ ಮೂಲಕ ಸಾಗಲು ಸಾಧ್ಯವಿದೆ ಎಂದರು.

ಸಭಾಧ್ಯಕ್ಷತೆಯನ್ನು ವಹಿಸಿದ್ದ ಅನುಗ್ರಹ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಗಣೇಶ್‌ ಪ್ರಸಾದ್‌ ನಾಯರ್‌ ಮಾತನಾಡಿ, ಚೆಸ್‌ ಮೂಲಕ ವಿದ್ಯಾರ್ಥಿಗಳ ಬುದ್ದಿ ಚುರುಕಾಗುತ್ತದೆ. ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಚೆಸ್‌ ಬೆಳೆಯುತ್ತಿದೆ. ಇದಕ್ಕಾಗಿ ಗ್ರಾಮೀಣ ಭಾಗದಿಂದಲೂ ಪ್ರತಿಭೆಗಳಿಗೆ ಬೆಳೆಯಲು ಅವಕಾಶ ಕಲ್ಪಿಸಲಾಗುತ್ತದೆ ಎಂದರು.

ಅತಿಥಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಅಧ್ಯಕ್ಷ ರಮೇಶ್‌ ಕೋಟೆ ಮಾತನಾಡಿ, ಎಲ್ಲಾ ಮಕ್ಕಳು ಸಮರ್ಥರಿರುತ್ತಾರೆ. ಚೆಸ್ ಸ್ಫರ್ಧೆ‌ ಎಲ್ಲಾ ಸ್ಫರ್ಧೆಗಳ ಮಾದರಿ ಅಲ್ಲ. ಇಲ್ಲಿ ಗೆಲುವು ಮಾತ್ರವೇ ಮುಖ್ಯವಲ್ಲ, ಚುರುಕು ಹಾಗೂ ಬೆಳವಣಿಗೆ ಮುಖ್ಯ ಎಂದರು.

ವೇದಿಕೆಯಲ್ಲಿ ಕುಮಾರಸ್ವಾಮಿ ವಿದ್ಯಾಲಯದ ಸಂಚಾಲಕ ಚಂದ್ರಶೇಖರ ನಾಯರ್‌, ಅನುಗ್ರಹ ಎಜುಕೇಶನ್‌ ಟ್ರಸ್ಟ್‌ ಉಪಾಧ್ಯಕ್ಷ ಶಿವರಾಮ ಏನೆಕಲ್ಲು, ಕುಮಾರಸ್ವಾಮಿ ವಿದ್ಯಾಲಯದ ಮುಖ್ಯಶಿಕ್ಷಕಿ ವಿದ್ಯಾರತ್ನ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಭಾರತಿ ದಿನೇಶ್‌, ಸಾಮಾಜಿಕ ಕಾರ್ಯಕರ್ತ, ಸಮಾಜಸೇವಾ  ಟ್ರಸ್ಟ್‌ ಅಧ್ಯಕ್ಷ ರವಿ ಕಕ್ಕೆಪದವು ಉಪಸ್ಥಿತರಿದ್ದರು.

ಉಬರ್‌ ಚೆಸ್‌ ಎಸೋಸಿಯೇಶನ್‌ ನಿರ್ದೇಶಕ ಜಗನ್ನಾಥ್‌ ಅಡಪ ಸ್ವಾಗತಿಸಿ ಪ್ರಸ್ತಾವನೆಗೈದರು. ಶಿಕ್ಷಕ ಯೋಗನಾಥ್‌ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭ ರಾಜ್ಯ ಮಟ್ಟದ ಚೆಸ್‌ ಸ್ಫರ್ಧೆಯಲ್ಲಿ ಭಾಗವಹಿಸಿದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಪೂರ್ವಿ ಅವರನ್ನು ಗೌರವಿಸಲಾಯಿತು.

ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಪೂರ್ವಿ ಅವರನ್ನು ಗೌರವಿಸಲಾಯಿತು
Inter-district level chess tournament was held on Sunday at Kumaraswamy Vidyalaya in Kukke Subrahmanya. By Uber Chess Academy, in collaboration with Dakshina Kannada District Chess Association.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

5 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

6 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

6 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

16 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

18 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago