Advertisement
ಕಲೆ-ಸಂಸ್ಕೃತಿ

ಪದ್ಯಾಣ ಗಣಪತಿ ಭಟ್‌ ಅವರಿಗೆ ವಳಲಂಬೆಯಲ್ಲಿ ನುಡಿನಮನ | ಕಲಾವಿದನಾಗಿಯೂ ಅಭಿಜಾತ ಕಲಾವಿದನಾಗಿಯೂ ಬೆಳೆದವರು ಪದ್ಯಾಣ ಗಣಪತಿ ಭಟ್ – ಗಿರೀಶ್‌ ಭಟ್‌ ಮುಳಿಯಾಲ |

Share
ಗಿರೀಶ್‌ ಭಟ್‌ ಮುಳಿಯಾಲ

ವಿವಿಧ ಶೈಲಿಗಳ ನಡುವೆ ಹೊಸತನದ ಭಾಗವತರ ಕೊಂಡಿಯಾಗಿ ಯಕ್ಷಗಾನ ರಂಗ ಸಾಗಿಸಿದವರು ಪದ್ಯಾಣ ಗಣಪತಿ ಭಟ್‌ ಅವರು ಕಲಾವಿದನಾಗಿಯೂ ಅಭಿಜಾತ ಕಲಾವಿದನಾಗಿಯೂ ಬೆಳೆದವರು. ಅನೇಕರನ್ನು ಬೆಳೆಸಿದವರು ಪದ್ಯಾಣ ಗಣಪತಿ ಭಟ್‌ ಎಂದು ನ್ಯಾಯವಾದಿ ಗಿರೀಶ್‌ ಭಟ್‌ ಮುಳಿಯಾಲ ಹೇಳಿದರು.

ಅವರು ಗುತ್ತಿಗಾರಿನ ವಳಲಂಬೆಯಲ್ಲಿ ಯಕ್ಷಕಲಾಭಿಮಾನಿ ಮಿತ್ರರ ವತಿಯಿಂದ ನಡೆದ ಯಕ್ಷಗಾನ ಗಾನಾರ್ಚನೆ ಕಾರ್ಯಕ್ರಮದಲ್ಲಿ  “ಪದ್ಯಾಣ ಗಣಪತಿ ಭಟ್‌ ”  ಅವರಿಗೆ ನುಡಿನಮನ ಸಲ್ಲಿಸಿದರು. ಪದಯಾನದ ಚಿಗುರು ಹೆಮ್ಮರವಾಗಿ ಬೆಳೆದದ್ದು ಮಾತ್ರವಲ್ಲ ಅನೇಕರನ್ನು ಬೆಳೆಯಿಸಿದ್ದಾರೆ ಕೂಡಾ.  ಪದ್ಯಾಣ ಎಂಬ ಶಬ್ದದಲ್ಲಿಯೇ ಪದ್ಯ ಎನ್ನುವ ಭಾವವೂ ಇದೆ, ಹೀಗಾಗಿ ವಿವಿಧ ಶೈಲಿಗಳ ನಡುವೆ ಹೊಸತನದ ಅಧ್ಯಯನದಲ್ಲಿ  ನಿರತರಾಗಿ ಹೊಸಶೈಲಿಯ ಜೊತೆಗೆ ಪರಿಪಕ್ವವಾದ ಪದಯಾನ ಮಾಡಿದ್ದಾರೆ ಎಂದರು.

ಸೂಕ್ತವಾದ ರಾಗ ಅಳವಡಿಕೆ, ಪಕ್ಕವಾದ್ಯದವರೊಂದಿಗೆ ಕಸರತ್ತು ಇತ್ಯಾದಿಗಳಲ್ಲೂ ಪ್ರೌಢಿಮೆ ಮೆರೆದವರು. ಸಂಘಟನೆ ದೃಷ್ಟಿಯಿಂದಲೂ ಸಹಭಾಗಿತ್ವ ನೀಡುವ ಪದ್ಯಾಣರು , ಒಡನಾಡಿಯಾಗಿ ಕಲಾವಿದರನ್ನು  ಮಾತನಾಡಿಸುವವರಾಗಿದ್ದರು. ಯಕ್ಷಗಾನ ರಂಗದಲ್ಲಿ ಪದ್ಯಾಣರು ಅಭಿಜಾತ ಎನಿಸಿಕೊಂಡವರು, ಕಲೆಯನ್ನು ಧಾರೆ ಎರೆದು ಬೆಳೆಸುವವರು ಆಗಿದ್ದರು, ಅಂತಹ ಮೇರು ವ್ಯಕ್ತಿತ್ವ ಇಲ್ಲವಾಗಿರುವುದು  ಯಕ್ಷರಂಗಕ್ಕೆ ತುಂಬಲಾರದ ನಷ್ಟ, ಆದರೆ ಅದೇ ಪರಂಪರೆ ಮುಂದುವರಿಯಲಿ ಎಂದು ಗಿರೀಶ್‌ ಮುಳಿಯಾಲ ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಗೆ ಋತುಮಾನ ಬೇಡಿಕೆ | ಯಾವ ತಿಂಗಳಲ್ಲಿ ಹೆಚ್ಚು ಲಾಭ? ಯಾವಾಗ ಮಾರುಕಟ್ಟೆ ಮಂದಗತಿ?

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…

4 hours ago

ವಿದೇಶಿ ಅಡಿಕೆ ಶಂಕೆ – ತೆರಿಗೆ ವಂಚನೆ ವಿವಾದ | ವಶಪಡಿಸಿಕೊಂಡ 380 ಚೀಲ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಣೆ

ಕಸ್ಟಮ್ಸ್‌ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…

4 hours ago

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

20 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago